ಡೈಲಿ ವಾರ್ತೆ:03 ಮೇ 2023

ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತ ಪ್ರೇಮಿಗಳ ಶವ ಪತ್ತೆ.!

ವಿಜಯಪುರ: ವಿಜಯಪುರ ಜಿಲ್ಲೆಯ ಅಂಗಡಗೇರಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಮರವೊಂದಕ್ಕೆ ಅಪ್ರಾಪ್ತ ವಯಸ್ಕ ಪ್ರೇಮಿಗಳು ಒಂದೇ ವೇಲ್‌ನಿಂದ ನೇಣು ಹಾಕಿಕೊಂಡು ಸಾವನ್ನಪ್ಪಿದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ.

ಇಬ್ಬರೂ ಅಪ್ರಾಪ್ತ ವಯಸ್ಕರಾಗಿದ್ದು, ಶನಿವಾರ ಮನೆಯಿಂದ ಪರಾರಿಯಾಗಿದ್ದರು. ಇನ್ನು ಕಳೆದ ಮೂರು ದಿನಗಳಿಂದ ಇಬ್ಬರನ್ನೂ ಮನೆಯವರು ಹುಡುಕಾಡುತ್ತಿದ್ದರು. ಆದರೆ, ಎಲ್ಲಿಯೂ ಪತ್ತೆಯಾಗಿರಲಿಲ್ಲ. ಇಬ್ಬರೂ ಪ್ರೇಮಿಗಳು ಅಪ್ತಾಪ್ತ ವಯಸ್ಕರಾಗಿದ್ದು, ಹುಡುಗಿಗೆ 15 ವರ್ಷ ಹಾಗೂ ಹುಡಗನಿಗೆ 16 ವರ್ಷ ಎಂದು ತಿಳಿದುಬಂದಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಅಂಗಡಗೇರಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಮರವೊಂದಕ್ಕೆ ಒಂದೇ ವೇಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಶವಗಳು ನೇತಾಡುತ್ತಿವೆ.

ಮೃತ ಪ್ರೇಮಿಗಳನ್ನು ಸಕ್ಕೂಬಾಯಿ ಮಾದರ (15) ಹಾಗೂ ಸಚಿನ್ ಮಾದರ (16) ಎಂದು ಗುರುತಿಸಲಾಗಿದೆ. ಇನ್ನು ಕೆಲಸದ ನಿಮಿತ್ತ ಗ್ರಾಮಸ್ಥರು ಜಮೀನಿಗೆ ತೆರಳಿದ್ದಾಗ ಶವಗಳು ಮರದಲ್ಲಿ ನೇತಾಡುವುದನ್ನು ಕಂಡಿದ್ದಾರೆ. ಕೂಡಲೇ ಈ ಘಟನೆಯನ್ನು ಊರಿನ ಹಿರಿಯರಿಗೆ ತಿಳಿಸಿದ್ದು. ಕೂಡಲೇ ಗ್ರಾಮಸ್ಥರು ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ. ನಂತರ, ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಸ್ಥಳೀಯರ ನೆರವಿನಿಂದ ಮೃತ ದೇಹಗಳನ್ನು ಮರದಿಂದ ಕೆಳಗಿಳಿಸಿ, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಎನ್‌ಟಿಪಿಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.