ಡೈಲಿ ವಾರ್ತೆ: 06 ಮೇ 2023

ವಿಜಯಪುರ ನಗರದಲ್ಲಿ ಗುಂಡಿಕ್ಕಿ ಕಾರ್ಪೊರೇಟರ್ ಪತಿಯ ಹತ್ಯೆ;

ವಿಜಯಪುರ: ನಗರದ 19ನೇ ವಾರ್ಡ್‌ನ ಪಾಲಿಕೆ ಸದಸ್ಯೆಯ ಪತಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಇಲ್ಲಿನ ಚಾಂದಪುರ ಕಾಲೋನಿಯಲ್ಲಿ ಶನಿವಾರ ಬೆಳಗ್ಗೆ ವರದಿಯಾಗಿದೆ.

ಹೈದರ್ ಅಲಿ ನದಾಫ್ ಹತ್ಯೆಗೀಡಾದವರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಸ್ಥಳದಲ್ಲಿಯೇ ಹೈದರ್ ಅಲಿ ನದಾಫ್ ಮೃತಪಟ್ಟಿದ್ದಾರೆ. ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಲನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.