ಡೈಲಿ ವಾರ್ತೆ: 06 ಮೇ 2023

ಕೊಲ್ಲೂರಿನಲ್ಲಿ ನಡೆದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ರಾಜ್ಯದ ಧಾರ್ಮಿಕ ಧತ್ತಿ ಆಯುಕ್ತರ ಭೇಟಿ

ಕೊಲ್ಲೂರು: ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಲುವಾಗಿ ಮೂಕಾಂಬಿಕೆಯ ಸನ್ನಿಧಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯದ ಧಾರ್ಮಿಕ ಧತ್ತಿ ಇಲಾಖೆಯ ಮಾನ್ಯ ಆಯುಕ್ತರಾದ ಶ್ರೀ ಹೆಚ್ ಬಸವರಾಜೇಂದ್ರ ಭಾ.ಆ. ಸೆ. ಅಷ್ಬಂಧ ಬ್ರಹಹ್ಮಕಲಶಾಭಿಷೇಕದಲ್ಲಿ ಪಾಲ್ಗೊಂಡರು.

ದಿನಾಂಕ 5. 05. 2023 ರಂದು ಮೂಕಾಂಬಿಕಾ ದೇವಿಗೆ ಪೂಜೆ ಸಲ್ಲಿಸಿದ ಅವರು ಬ್ರಹ್ಮಕಲಶಾಭಿಶೇಕದ ಪ್ರಾರಂಭದಿಂದಲೂ ಕೊನೆಯ ತನಕ ಅತ್ಯಂತ ಭಕ್ತಿಯಿಂದ ಎಲ್ಲಾ ಪೂಜಾ ವಿಧಿ ವಿಧಾನದಲ್ಲಿ ಪಾಲ್ಗೊಂಡರು. ದಿನಾಂಕ 4-05-2023 ಕ್ಷೇತ್ರದಲ್ಲಿ ವಾಸ್ತವ್ಯ ಹೂಡಿದ್ದರು.

ಅಷ್ಟಬಂಧ ಬ್ರಹ್ಮಕಲಶೋತ್ಸವದ ನಿಮಿತ್ತ ಆಯೋಜಿಸಲಾದ ವ್ಯವಸ್ಥೆಯ ಕುರಿತಂತೆ ಮಾಹಿತಿ ಪಡೆದಂತಹ ಆಯುಕ್ತರು ವ್ಯವಸ್ಥೆಯ ಬಗ್ಗೆ ಮೆಚ್ಚುಗೆಯನ್ನ ವ್ಯಕ್ತ ಪಡಿಸಿದರು.

ಜೊತೆಗೆ ಸಲಹೆ ಸೂಚನೆಯನ್ನ ನೀಡಿದರು. ದೇವಸ್ಥಾನದ ವತಿಯಿಂದ ಆಯುಕ್ತರಿಗೆ ದೇವರ ಪ್ರಸಾದ ನೀಡಿ ಗೌರವಿಸಲಾಯ್ತು. ಈ ಸಂದರ್ಭದಲ್ಲಿ ಕ್ಷೇತ್ರದ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ ಶೆಟ್ಟಿ, ಸರ್ವ ಸದಸ್ಯರೂ ಹಾಗೂ ಕಾರ್ಯನಿರ್ವಹಣಾಧಿಕಾರಿಗಳಾದ ಎಸ್. ಸಿ. ಕೋಟಾರಗಸ್ತಿ ಉಪಸ್ಥಿತರಿದ್ದರು.