ಡೈಲಿ ವಾರ್ತೆ: 08ಮೇ 2023

ಚುನಾವಣೆ ಪ್ರಚಾರದ ವೇಳೆ ಕಾಂಗ್ರೇಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಜಗಳ: ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ.!

ಬೆಂಗಳೂರು:ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿ ನಿನ್ನೆ ರಾತ್ರಿ ಬಿಜೆಪಿ ಅಭ್ಯರ್ಥಿ ಶ್ರೀ ಧರ್ ರೆಡ್ಡಿ ಪರ ಪ್ರಚಾರಕ್ಕೆ ತೆರಳಿದ್ದ ಕಾರ್ಯಕರ್ತನೋರ್ವನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಈ ವೇಳೆ ಕಾಂಗ್ರೇಸ್ ಹಾಗೂ ಬಿಜೆಪಿ ಕಾರ್ಯಕರ್ತರ 2 ಗುಂಪುಗಳ ನಡುವೆ ಜಗಳವೇ ಶುರುವಾಗಿತ್ತು.

ಸ್ಥಳದಲ್ಲಿದ್ದ ಪೊಲೀಸರು ಎರಡು ಗುಂಪುಗಳ ಕಾರ್ಯಕರ್ತರನ್ನು ಸಂಬಾಳಿಸಲು ಹರಸಾಹಸ ಪಟ್ಟರು. ಘಟನೆ ಬಳಿಕ ಬಿಜೆಪಿ ಅಭ್ಯರ್ಥಿ ಶ್ರೀಧರ್ ಮಡಿವಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.