ಡೈಲಿ ವಾರ್ತೆ:09 ಮೇ 2023

ಉಳ್ಳಾಲ: ಕಾಂಗ್ರೆಸ್‌ ಪ್ರಚಾರ ವಾಹನ ಚಾಲಕನಿಗೆ ಎಸ್‌ಡಿಪಿಐ ಕಾರ್ಯಕರ್ತನಿಂದ ಹಲ್ಲೆ

ಉಳ್ಳಾಲ: ಎಸ್‌ಡಿಪಿಐ ರ್‍ಯಾಲಿ ಸಂದರ್ಭ ಕಾಂಗ್ರೆಸ್‌ ಪ್ರಚಾರದ ವಾಹನದಲ್ಲಿ ಹಾಡನ್ನು ಹಾಕಿರುವುದನ್ನು ಆಕ್ಷೇಪಿಸಿದ ಎಸ್‌ಡಿಪಿಐ ಕಾರ್ಯಕರ್ತರು, ಚಾಲಕನಿಗೆ ಹಲ್ಲೆ ನಡೆಸಿದ್ದ ಪ್ರಕರಣ ಕೊಣಾಜೆ ಠಾಣೆಯ ಮೆಟ್ಟಿಲೇರಿದ್ದು, ಕೊನೆಗೆ ರಾಜಿಯಲ್ಲಿ ಇತ್ಯರ್ಥಗೊಂಡಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದ ಎಸ್‌ಡಿಪಿಐ ಕಾರ್ಯಕರ್ತನನ್ನು ಬಿಡುಗಡೆಗೊಳಿಸಿದ್ದಾರೆ.

ಕಾಂಗ್ರೆಸ್‌ ಚಾಲಕ ನೌಫಾಲ್‌ ಅವರಿಗೆ ಎಸ್‌ಡಿಪಿಐ ಕಾರ್ಯಕರ್ತರು ನಾಟೆಕಲ್‌ ಸಮೀಪ ಹಲ್ಲೆ ನಡೆಸಿರುವುದನ್ನು ಖಂಡಿಸಿ ದೇರಳಕಟ್ಟೆ ಸಮೀಪ ಕಾಂಗ್ರೆಸ್‌ ಕಾರ್ಯಕರ್ತರು ತಪ್ಪಿತಸ್ಥರನ್ನು ತತ್‌ಕ್ಷಣವೇ ಬಂಧಿಸುವಂತೆ ಮುತ್ತಿಗೆ ಹಾಕಿದ್ದರು.

ಈ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಸಂಶಯ ವ್ಯಕ್ತಪಡಿಸಿದ ಎಸ್‌ಡಿಪಿಐ ಕಾರ್ಯಕರ್ತನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದರು. ತಡರಾತ್ರಿ 2 ಗಂಟೆಯವರೆಗೆ ಎರಡು ಪಕ್ಷಗಳ ಮುಖಂಡರು ಮಾತುಕತೆ ನಡೆಸಿ ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥಪಡಿಸಲು ತೀರ್ಮಾನಿಸಿದ್ದರು. ಅನಂತರ ಬಂಧಿತ ಕಾರ್ಯಕರ್ತನನ್ನು ಬಿಡುಗಡೆಗೊಳಿಸಲಾಗಿದೆ.