ಡೈಲಿ ವಾರ್ತೆ:11 ಮೇ 2023

ಕಾರು ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ: ಗಾಯಾಳು ಬಾಲಕ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತ್ಯು

ಕಾಸರಗೋಡು:ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಫಘಾತದಲ್ಲಿ 16 ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಕಾಸರಗೋಡು ಚೆರೂರಿನಲ್ಲಿ ನಡೆದಿದೆ

ಅಬ್ದುಲ್ ರಹಮಾನ್ ಮತ್ತು ಸಮೀನಾ ದಂಪತಿಯ ಪುತ್ರ ಮುಹಮ್ಮದ್ ರಫಾಲ್ (16) ಮೃತಪಟ್ಟ ಬಾಲಕ.
ರಫಾಲ್ 10ನೇ ತರಗತಿ ವಿದ್ಯಾರ್ಥಿಯಾಗಿದ್ದನು. ಏಪ್ರಿಲ್ 30 ರಂದು ನೀರ್ಚಾಲು ಕನ್ಯಾಪ್ಪಾಡಿಯಲ್ಲಿ ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ರಫಾಲ್ ಗಂಭೀರವಾಗಿ ಗಾಯಗೊಂಡಿದ್ದ.ತಕ್ಷಣ ಬಾಲಕ ರಫಾಲ್ ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿನ್ನೆ ಮೃತಪಟ್ಟಿದ್ದಾನೆ.ಈ ಕುರಿತು ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಲಕನ ಸಾವಿನಿಂದ ಇದೀಗ ಕುಟುಂಬದ ರೋಧನ ಮುಗಿಲು ಮುಟ್ಟಿದೆ.