ಡೈಲಿ ವಾರ್ತೆ: 15ಮೇ 2023

ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಸೋಲಿಗೆ ನೊಂದು ಅಭಿಮಾನಿ ಕೆರೆಗೆ ಹಾರಿ ಸಾವಿಗೆ ಶರಣು!

ಚಿಕ್ಕಬಳ್ಳಾಪುರ: ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರ ಸೋಲಿನಿಂದ ನೊಂದ ಅಭಿಮಾನಿಯೋರ್ವ ಕೆರೆಗೆ ಹಾರಿ ಸಾವಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ವಡ್ರೆಪಾಳ್ಯದಲ್ಲಿ ನಡೆದಿದೆ.

ಚಿತ್ತಾರ ವೆಂಕಟೇಶ ಎಂಬವರು ಸಾವಿಗೆ ಶರಣಾದವರಾಗಿದ್ದು, ಇವರು ಸುಧಾಕರ್ ಅವರ ಕಟ್ಟಾ ಅಭಿಮಾನಿಯಾಗಿದ್ದರು ಎನ್ನಲಾಗಿದೆ. ಸುಧಾಕರ್ ಸೋಲಿನಿಂದ ನೊಂದು ಸಾವಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ನ ಪ್ರದೀಪ್ ಈಶ್ವರ್ 10,642 ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದರು. ರಾಜಕಾರಣಕ್ಕೆ ಹೊಸದಾಗಿ ಪಾದರ್ಪಣೆ ಮಾಡಿ, ಕೆಲವೇ ತಿಂಗಳುಗಳ ಕಾಲ ಪ್ರಚಾರ ನಡೆಸಿ ಜನರ ಮನಸ್ಸು ಗೆದ್ದಿದ್ದ ಪ್ರದೀಪ್ ಚಿಕ್ಕಬಳ್ಳಾಪುರದ ಪ್ರಭಾವಿ ಡಾ.ಸುಧಾಕರ್ ಅವರಿಗೆ ಸೋಲಿನ ರುಚಿ ತೋರಿಸಿದ್ದರು.