ಡೈಲಿ ವಾರ್ತೆ:17 ಮೇ 2023

ಪ್ರಿಯತಮೆಯನ್ನು ಕೊಲೆಗೈದು ಪೊಲೀಸರಿಗೆ ಶರಣಾದ ಪ್ರಿಯಕರ.!

ಕಾಸರಗೋಡು:ಯುವತಿಯೋರ್ವಳನ್ನು ಕೊಲೆಗೈದು ಪ್ರಿಯಕರ ಪೊಲೀಸರಿಗೆ ಶರಣಾದ ಘಟನೆ ಕಾಞ೦ಗಾಡ್ ನಲ್ಲಿ ನಡೆದಿದೆ.

ಬ್ಯೂಟಿಶಿಯನ್ ಆಗಿದ್ದ ಉದುಮ ಮಾಂಗಾಡ್ ನ ದೇವಿಕಾ(34) ಕೊಲೆಯಾದ ಯುವತಿ. ಕೊಲೆಯ ಬಳಿಕ ಈಕೆಯ ಪ್ರಿಯಕರ ಹೊಸದುರ್ಗ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ.
ಬೋವಿಕ್ಕಾನ ದ ಸತೀಶ್ ಭಾಸ್ಕರ್(36) ಠಾಣೆಗೆ ಶರಣಾದ ಆರೋಪಿ.ಈತ ಕಾಞ೦ಗಾಡ್ ನ ಖಾಸಗಿ ಸಂಸ್ಥೆಯಲ್ಲಿ ಸೆಕ್ಯೂರಿಟಿ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗಿದೆ.

ಇಬ್ಬರು ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ಮನಸ್ತಾಪ ಉಂಟಾಗಿತ್ತು ಎನ್ನಲಾಗಿದೆ. ಇಬ್ಬರ ಕೌಟುಂಬದವರ ನಡುವೆ ಸಮಸ್ಯೆ ಉಂಟಾಗಿದ್ದು, ದೇವಿಕಾ ವಿರುದ್ಧ ಸತೀಶ್ ಭಾಸ್ಕರ್ ನ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಮೇಲ್ಪರಂಬ ಠಾಣಾ ಪೊಲೀಸರು ಎರಡು ಕುಟುಂಬದವರನ್ನು ಕರೆದು ಮಾತುಕತೆ ನಡೆಸಿದ್ದರು.

ಸತೀಶ್ ಕಳೆದ ಒಂದು ವಾರದಿಂದ ವಸತಿಗ್ರಹದಲ್ಲಿ ವಾಸವಾಗಿದ್ದ, ನಿನ್ನೆ ಮಧ್ಯಾಹ್ನ ದೇವಿಕಾಳನ್ನು ವಸತಿಗೃಹಕ್ಕೆ ಕರೆಸಿಕೊಂಡು ಕೊಲೆ‌ ಮಾಡಿದ್ದಾನೆ.ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.