ಡೈಲಿ ವಾರ್ತೆ: 18 ಮೇ 2023

ತೀರ್ಥಹಳ್ಳಿ ವಿಶ್ವಕರ್ಮ ಸಮುದಾಯ ಭವನದಲ್ಲಿ ಬೆಳ್ಳಂ ಬೆಳಗ್ಗೆ ಡಬಲ್ ಮರ್ಡರ್.!

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಸಮೀಪದ ಕುರುವಳ್ಳಿಯ ಪುತ್ತಿಗೆ ಮಠದ ಸಮೀಪದ ವಿಶ್ವಕರ್ಮ ಸಮುದಾಯ ಭವನದೊಳಗೆ ಕೂಲಿ ಕಾರ್ಮಿಕರಿಬ್ಬರ ಬರ್ಬರ ಹತ್ಯೆ ನಡೆದಿದೆ.

ಮೃತಪಟ್ಟವರು ದಾವಣಗೆರೆ ಮೂಲದ ಕಾರ್ಮಿಕರಾದ ಮಂಜಪ್ಪ (45) ಬೀರಪ್ಪ (46) ಹತ್ಯೆಗೀಡಾದ ಕಾರ್ಮಿಕರು ಎಂದು ತಿಳಿದುಬಂದಿದೆ.

ರಾತ್ರಿ ಕುಡಿದು ಹಣದ ವ್ಯವಹಾರದಲ್ಲಿ ಈ ಹತ್ಯೆಯ ಘಟನೆ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ.
ಸಮುದಾಯ ಭವನದ ಕೆಲಸಕ್ಕೆ ಬಂದಿದ್ದ ಕಾರ್ಮಿಕರ ಮೇಲೆ ಕಲ್ಲನ್ನು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.