ಡೈಲಿ ವಾರ್ತೆ: 19 ಮೇ 2023

ಬೈಕ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ: ಇಬ್ಬರು ಮೃತ್ಯು, ಓರ್ವ ಗಂಭೀರ.!

ಗದಗ : ಗದಗ ಜಿಲ್ಲೆಯ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದ ಸಮೀಪ ಬೈಕೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೃತ ದುರ್ದೈವಿಗಳು ಶ್ರೀಧರ ಗಡಗಿ (15) ಹಾಗೂ ಅನೂಪ್‌ ಕುಮಾರ ಇಟಗಿ (16) ಎಂದು ತಿಳಿದು ಬಂದಿದೆ.
ಇವರಿಬ್ಬರು ಮತ್ತು ಇನ್ನೊಬ್ಬ ಬಾಲಕ ಒಂದೇ ಬೈಕ್‌ನಲ್ಲಿ ಸಾಗುತ್ತಿದ್ದರು. ಅಬ್ಬಿಗೇರಿ ಗ್ರಾಮದಿಂದ ರೋಣ ಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಬೈಕ್‌ ನಿಯಂತ್ರಣ ತಪ್ಪಿ ನೇರವಾಗಿ ಹೋಗಿ ಮರಕ್ಕೆ ಡಿಕ್ಕಿ ಹೊಡೆದಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ ಮೌನೇಶ ಎಂಬಾತ ಗಂಭೀರ ಗಾಯಗೊಂಡಿದ್ದಾನೆ.

ರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.