ಡೈಲಿ ವಾರ್ತೆ:25 ಮೇ 2023

ಪೊಲೀಸ್ ವಶಕ್ಕೆ ಪಡೆಯುವ ವೇಳೆ ಮಹಡಿಯಿಂದ ಬಿದ್ದು ಯುವಕ ಮೃತ್ಯು: ಪೊಲೀಸ್ ವಶದಲ್ಲೇ ಯುವಕ ಸಾವನ್ನಪ್ಪಿದ್ದಾನೆ ಎಂದು ಕುಟುಂಬಸ್ಥರ ಆರೋಪ.!

ಬೆಂಗಳೂರು:ಪೊಲೀಸರು ವಶಕ್ಕೆ ಪಡೆಯಲು ತೆರಳಿದ್ದ ವೇಳೆ ಯುವಕನೋರ್ವ 4ನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯ ಬೇಗೂರು ರಸ್ತೆಯಲ್ಲಿ ನಡೆದಿದೆ.

ಮೃತ ಯುವಕನಿಗೆ ಮೊಹಮ್ಮದ್ ಹುಸೇನ್(31) ಎಂದು ಗುರುತಿಸಲಾಗಿದೆ. ಪ್ರಕರಣವೊಂದರ ಸಂಬಂಧ ಹುಸೇನ್ ಗೆ ವಶಕ್ಕೆ ಪಡೆಯಲು ಪೊಲೀಸರು ತೆರಳಿದ್ದರು. 4ನೇ ಮಹಡಿಯಲ್ಲಿ ವಶಕ್ಕೆ ಪಡೆಯುತ್ತಿದ್ದ ವೇಳೆ ಬೆತ್ತಲೆಯಾಗಿ ಬಿದ್ದು ಹುಸೇನ್ ಮೃತಪಟ್ಟಿದ್ದಾನೆ.

ವಶಕ್ಕೆ ಪಡೆಯಲು ಬಂದಿದ್ದ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಮೊಹಮ್ಮದ್ ಹುಸೇನ್ ಕುಟುಂಬದವರು ಆರೋಪಿಸಿದ್ದಾರೆ. ಮಹಮ್ಮದ್ ಹುಸೇನ್ ಪೊಲೀಸ್ ವಶದಲ್ಲೇ ಸಾವನ್ನಪ್ಪಿದ್ದಾನೆ ಎಂದು ಬೊಮ್ಮನಹಳ್ಳಿ ಪೊಲೀಸ್ ಸಿಬ್ಬಂದಿ ಮೇಲೆ ಆತನ ಕುಟುಂಬದವರು ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸ್ ಸಿಬ್ಬಂದಿ ಮೇಲೆ ಕೊಲೆ ಪ್ರಕರಣ ದಾಖಲಿಸುವಂತೆ ಕುಟುಂಬ ಆಗ್ರಹಿಸಿದೆ.

ಘಟನೆ ಬಳಿಕ ಸೇಂಟ್ಸ್ ಜಾನ್ಸ್ ಆಸ್ಪತ್ರೆಗೆ ಹುಸೇನ್ನನ್ನು ಪೊಲೀಸರು ಕರೆತಂದಿದ್ದರು. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಹಸ್ತಾಂತರ ಮಾಡಲಾಗುತ್ತಿದೆ ಎನ್ನಲಾಗಿದೆ.