ಡೈಲಿ ವಾರ್ತೆ:28 ಮೇ 2023

ಉಳ್ಳಾಲ:ಯುವತಿಗೆ ಕಿರುಕುಳ ಕೊಟ್ಟು ಯುವಕ ಪರಾರಿ, ದೂರು ದಾಖಲು

ಉಳ್ಳಾಲ:ಯುವತಿಯೊಬ್ಬಳಿಗೆ ಅಪರಿಚಿತ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿರುವ ಆರೋಪ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಕೇಳಿಬಂದಿದೆ.

ಈ ಕುರಿತು ಸಂತ್ರಸ್ತೆ ‌ಯುವತಿ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂತ್ರಸ್ತೆ ‌ಯುವತಿ ‌ಬಸ್ತಿಪಡ್ಪು ತನ್ನ ನಿವಾಸದಿಂದ ಭಗವತಿ ದೇವಸ್ಥಾನದ ಒಳರಸ್ತೆಯಾಗಿ ರಾತ್ರಿ 7.30ರ ವೇಳೆ ನಡೆದು ಕೊಂಡು ಬರುತ್ತಿದ್ದಾಗ ಕಬ್ಬಿಣದ ಕಪಾಟು ತಯಾರು ಮಾಡುವ ಅಂಗಡಿ ಬಳಿ ನಿಂತಿದ್ದ ಅಪರಿಚಿತ ವ್ಯಕ್ತಿ ಈ ಬಳಿ ಬಂದು ಮೈಮೇಲೆ ಕೈ ಹಾಕಿದ್ದಾನೆ. ಈ ವೇಳೆ ಮಹಿಳೆ ಬೊಬ್ಬೆ ಹಾಕಿದ್ದು, ಇದರಿಂದ ಮಹಿಳೆಗೆ ಹಲ್ಲೆ ನಡೆಸಿ ಆರೋಪಿ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಕುರಿತು ಸಂತ್ರಸ್ತೆ ‌ಯುವತಿ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.