ಡೈಲಿ ವಾರ್ತೆ: 30 ಮೇ 2023

ಕುಂದಾಪುರ: ಈಜಲು ತೆರಳಿದ ಬಾಲಕ ಸಹಿತ ಇಬ್ಬರು ಸಾವು- ಮೂವರು ಬಾಲಕರ ರಕ್ಷಣೆ

ಕುಂದಾಪುರ: ತಾಲೂಕಿನ ಕಂದಾವರ ಗ್ರಾಮದ ಉಳ್ಳೂರು ಕಾಡಿನಕೊಂಡ ಎಂಬಲ್ಲಿ ಕಂದಾವರ ಡಂಪಿಂಗ್ ಯಾರ್ಡ್‌ ಹತ್ತಿರದ ಮದಗಗಕ್ಕೆ ಈಜಲು ತೆರಳಿದ್ದ ಶಂಕರನಾರಾಯಣ ಮದರ್ ಥೇರಸಾ ಕಾಲೇಜಿನ ಉಪನ್ಯಾಸಕ ಸೇರಿ ಇಬ್ಬರು ನೀರು ಪಾಲಾಗಿದ್ದಾರೆ.

ಉಪನ್ಯಾಸಕ ರಾಜೇಂದ್ರ ಶೆಟ್ಟಿಗಾರ (28) ಶಂಕರನಾರಾಯಣ ಹೈಸ್ಕೂಲ್ ವಿದ್ಯಾರ್ಥಿ ಭರತ್ ಶೆಟ್ಟಿಗಾರ (15) ನೀರಲ್ಲಿ ಮುಳುಗಿ ಮೃತರಾಗಿದ್ದಾರೆ.

ನಾಲ್ಕು ಎಕರೆ ವಿಸ್ತಾರದ ಮದಗಕ್ಕೆ ವಾರಾಹಿ ಏತ ನೀರಾವರಿ ಯೋಜನೆಯ ಮೂಲಕ ನೀರು ಹರಿದು ಬಂದಿರುವ ಉಳ್ಳೂರು – ಕಂದಾವರದ ಬೊಬ್ಬಯ೯ ಕೊಡ್ಲು ಮದಗಕ್ಕೆ 6 ಜನ ಈಜಲು ತೆರಳಿದ್ದಾರೆ. ಸುಮಾರು 10 ಪೀಟ್ ನೀರಿರುವ ಮದಗದಲ್ಲಿ ಭರತ್ ಆಯತಪ್ಪಿ ಮುಳುಗಿದ್ದನ್ನು ನೋಡಿದ ರಾಜೇಂದ್ರ ರಕ್ಷಣೆಗೆ ತೆರಳಿದಾಗ ಈಜು ಬಾರದ ಇಬ್ಬರೂ ನೀರಿನಲ್ಲಿ ಮುಳುಗಿದ್ದಾರೆ.

ಇನ್ನು ಭರತ್ ರಜೆಯ ಕಾರಣ ತನ್ನ ತಾಯಿಯ ಮನೆಗೆ ಬಂದಿದ್ದ, ಬಹುಮುಖ ಪ್ರತಿಭಾವಂತ ರಾಜೇಂದ್ರ ಮಂಗಳೂರಿನ ಕಾಲೇಜೊಂದರಲ್ಲಿ ಸೇವೆ ಸಲ್ಲಿಸಿ, ಇತ್ತೀಚೆಗೆ ಶಂಕರನಾರಾಯಣ ಕಾಲೇಜಿಗೆ ಸೇರಿದ್ದರು.

ಅಗ್ನಿ ಶಾಮಕ ದಳದವರು ಆಗಮಿಸಿ ಇಬ್ಬರ ಶವವನ್ನು ಮೇಲಕ್ಕೆತ್ತಿದ್ದಾರೆ.
ಈ ಬಗ್ಗೆ ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.