ಡೈಲಿ ವಾರ್ತೆ: 31 ಮೇ 2023

ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಮರದ ರೆಂಬೆ ಬಿದ್ದು ಮೂವರು ಗಂಭೀರ

ಜೋಧ್’ಪುರ: ಮರದ ರೆಂಬೆ ಬಿದ್ದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಈ ಕುರಿತ ವೀಡಿಯೋ ವ್ಯಾಪಕ ವೈರಲಾಗಿದ್ದು, ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮೂವರು ಯುವಕರ ಮೇಲೆ ಹಠಾತ್ ಮರದ ರೆಂಬೆ ಬೀಳುತ್ತಿರುವುದು ವೀಡಿಯೋದಲ್ಲಿ ಕಾಣಬಹುದು. ಎಲ್ಲರನ್ನೂ ಅಚ್ಚರಿಗೊಳಿಸುವ ಈ ವಿಡಿಯೋ ರಾಜಸ್ಥಾನದ ಜೋಧ್ಪುರದಲ್ಲಿ ನಡೆದಿದ್ದು ಎಂದು ಹೇಳಲಾಗುತ್ತಿದೆ.

ರಸ್ತೆ ಬದಿಯಲ್ಲಿದ್ದ ಮರದಿಂದ ಅದರ ಕೊಂಬೆ ಇದ್ದಕ್ಕಿದ್ದಂತೆ ಆ ಸಮಯದಲ್ಲಿ ರಸ್ತೆಯಲ್ಲಿ ಹಾದು ಹೋಗುತ್ತಿದ್ದ ಮೂವರ ತಲೆಯ ಮೇಲೆ ಬೀಳುತ್ತದೆ. ಇದರಿಂದ ಮೂವರು ಯುವಕರು ಕೆಳಗೆ ಬಿದ್ದಿದ್ದಾರೆ, ಇದನ್ನು ನೋಡಿದ ಸ್ಥಳೀಯರು ತಕ್ಷಣ ಮುಂದೆ ಓಡಿ ಬಂದು ಮರದ ಕೊಂಬೆಯಿಂದ ಅವರನ್ನು ಹೊರತೆಗೆಯುತ್ತಿರುವುದು ವೀಡಿಯೋದಲ್ಲಿ ಕಂಡುಬಂದಿದೆ.

ಇದೇ ವೇಳೆ ಸ್ಕೂಟಿಯಲ್ಲಿ ತೆರಳುತ್ತಿದ್ದ ಮೂವರು ಯುವಕರು ಹೆಲ್ಮೆಟ್ ಧರಿಸದೇ ಇರುವುದನ್ನು ವಿಡಿಯೋದಲ್ಲಿ ಕಾಣಬಹುದು. ಮಳೆಗಾಲದ ಆರಂಭವಾಗುತ್ತಿದ್ದು, ಬೀಸುತ್ತಿರುವ ಬಿರುಗಾಳಿಯಿಂದಾಗಿ ಏಕಾಏಕಿ ಮರದ ರೆಂಬೆಗಳು ತುಂಡಾಗಿ ಬೀಳುವ ಘಟನೆಗಳು ಹೆಚ್ಚಾಗುತ್ತಿವೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ರಸ್ತೆಯಲ್ಲಿ ವಾಹನಗಳಲ್ಲಿ ಸಂಚರಿಸುವಾಗ ಸಂಚಾರ ನಿಯಮಗಳನ್ನು ಪಾಲಿಸಬೇಕಾಗಿದೆ.