ಡೈಲಿ ವಾರ್ತೆ: 31 ಮೇ 2023

ಮೇ. 31 ರಂದು ನಡೆದ ಚೇತನಾ ಪ್ರೌಢಶಾಲೆ, ಹಂಗಾರಕಟ್ಟೆ ಶಾಲಾ ಪ್ರಾರಂಭೋತ್ಸವದ ಕಾರ್ಯಕ್ರಮ

ಮಾಬುಕಳ : ಚೇತನಾ ಪ್ರೌಢಶಾಲೆಯ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ದೀಪ ಬೆಳಗಿಸುವುದರ ಮೂಲಕ ವಿದ್ಯುತ್ತವಾಗಿ ಪ್ರಾರಂಭಗೊಂಡಿತು. ಹೊಸದಾಗಿ ದಾಖಲೆಯಾದ ವಿದ್ಯಾರ್ಥಿಗಳನ್ನು ಬ್ಯಾಂಡ್ ಮತ್ತು ವಾದ್ಯ ಷೋಷದೊಂದಿಗೆ ಸ್ವಾಗತಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ. ಭರತ್ ಕುಮಾರ್ ಶೆಟ್ಟಿ, ಅಧ್ಯಕ್ಷರು ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯ ಅತಿಥಿಗಳಾಗಿ ಫಾರ್ಚೂನ್ ಕಾಲೇಜ್ ಆಫ್ ನರ್ಸಿಂಗ್ ಇದರ ಚೇರ್‍ಮ್ಯಾನ್ ತಾರಾನಾಥ ಶೆಟ್ಟಿ ಮತ್ತು ಬಿ.ಡಿ. ಶೆಟ್ಟಿ ಕಾಲೇಜಿನ ಪ್ರಾಂಶುಪಾಲರಾದ ಸ್ಮಿತಾಮೋಲ್. ಅಂದಿನ ವಿದ್ಯಾರ್ಥಿ ಹರೀಶ್ ಕಿರಣ್ ತುಂಗ, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ವಿಘ್ನೇಶ್ವರ ಅಡಿಗ ಉಪಸ್ಥಿತರಿದ್ದರು.

ಹಾಗೂ ವಿದ್ಯಾರ್ಥಿಗಳ ಎಲ್ಲಾ ಪೋಷಕ ಬಂಧುಗಳು ಹಾಜರಿದ್ದರು.
ಚೇತನಾ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಕಲ್ಪನಾ ಶೆಟ್ಟಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸರ್ವರನ್ನು ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಹರ್ಷವರ್ಧನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು ಮತ್ತು ಹೊಸದಾಗಿ ದಾಖಲಾತಿಯಾದ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ, ಬ್ಯಾಗ್, ಪಠ್ಯಪುಸ್ತಕ ಮತ್ತು ನೋಟ್ ಪುಸ್ತಕ ವಿತರಿಸಲಾಯಿತು. ಅಧ್ಯಾಪಕರಾದ ಶ್ರೀ ಚಂದ್ರ ಸರ್ವರನ್ನು ವಂದಿಸಿದರು. ವಿದ್ಯಾರ್ಥಿಗಳಿಗೆ ಸಿಹಿತಿಂಡಿ ಹಂಚಿ, ಮಧ್ಯಾಹ್ನ ಸಿಹಿಯೂಟವನ್ನು ನೀಡಲಾಯಿತು.