ಡೈಲಿ ವಾರ್ತೆ:04 ಜೂನ್ 2023

ತರಳಬಾಳು ವಿದ್ಯಾಸಂಸ್ಥೆಯ ತರಳಬಾಳು ಗುರುಭವನ ತುಂಗಾತೀರ ಶಿವಮೊಗ್ಗದಲ್ಲಿ 5ರಿಂದ 10ನೇ ತರಗತಿವರೆಗೆ ಆಂಗ್ಲ ಮಾಧ್ಯಮ ಶಾಲೆಗೆ ಉಚಿತ ಪ್ರವೇಶ

ಹರಪನಹಳ್ಳಿ:(ವಿಜಯನಗರ ಜಿಲ್ಲೆ) :- ಶ್ರೀ ತರಳಬಾಳು ಜಗದ್ಗುರು ವಿದ್ಯಾ ಸಂಸ್ಥೆ(ರಿ,) ಸಿರಿಗೆರೆ. ತರಳುಬಾಳು ಗುರುಭವನ ತುಂಗಾತೀರ ಶಿವಮೊಗ್ಗದಲ್ಲಿ ಸುಸಜ್ಜಿತ ಭವ್ಯ ಕಟ್ಟಡದಲ್ಲಿ ಪ್ರತಿಷ್ಠಿತ ಆಂಗ್ಲ ಮಾಧ್ಯಮ ಶಾಲೆಯಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಜಾತ್ಯಾತೀತವಾಗಿ ಉಚಿತ ಪ್ರವೇಶ ಅವಕಾಶ ಕಲ್ಪಿಸಲಾಗಿದೆ.

ಉಚಿತ ಶಿಕ್ಷಣ ಹಾಗೂ ಸುಸಜ್ಜಿತ ವಸತಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಆಸಕ್ತ ಪೋಷಕರು ವಿಜಯನಗರ ಜಿಲ್ಲೆ ಹರಪನಹಳ್ಳಿ ನಗರದ ಹೆಚ್.ಪಿ.ಎಸ್ ಪಿಯು ಕಾಲೇಜಿನ ಕಛೇರಿಯಲ್ಲಿ ಅರ್ಜಿಗಳನ್ನು ಪಡೆದುಕೊಂಡು ಉಚಿತ ಪ್ರವೇಶ ಪಡೆದುಕೊಂಡು ಸದುಪಯೋಗಪಡಿಸಿಕೊಳ್ಳಿ ಎಂದು ಹರಪನಹಳ್ಳಿ ಹೆಚ್.ಪಿ.ಎಸ್ ಪಿಯು ಕಾಲೇಜಿನ ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಪಿ.ಮಹಾಭಲೇಶ್ವರ ಗೌಡ್ರು ಇವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.