ಡೈಲಿ ವಾರ್ತೆ:17 ಜೂನ್ 2023

“ಉತ್ತಮ ಮಳೆ ಹಾಗೂ ಬೆಳೆಗಾಗಿ”
ಜೂ.19 ರಂದು ಕೋಟ ಮಣೂರು ಮಹಾಲಿಂಗೇಶ್ವರ ಹಾಗೂ ಹೇರಂಬ ಮಹಾಗಣಪತಿ ದೇವಸ್ಥಾನದಲ್ಲಿ ಸೀಯಾಳ‌ ಅಭಿಷೇಕ

ಕೋಟ : ಉಡುಪಿ ಜಿಲ್ಲೆಯ ಕೋಟ ಮಣೂರು ಮಹಾಲಿಂಗೇಶ್ವರ ದೇವಸ್ಥಾನ, ಹೇರಂಬ ಮಹಾಗಣಪತಿ ದೇವಸ್ಥಾನದಲ್ಲಿ “ಉತ್ತಮ ಮಳೆ ಹಾಗೂ ಬೆಳೆಗಾಗಿ” ಇದೇ 19ರ ಸೋಮವಾರ ಬೆಳಿಗ್ಗೆ 10 ಗಂಟೆಗೆ ಸಾರ್ವಜನಿಕ ಸೀಯಾಳ ಅಭಿಷೇಕ ಸೇವೆ ನಡೆಯಲಿದೆ.

ದೇವಸ್ಥಾನದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಸೇವೆಯಲ್ಲಿ ಭಾಗವಹಿಸಿ ಊರಿಗೆ ಒಳಿತಾಗುವಂತೆ ಪ್ರಾರ್ಥಿಸಬೇಕಾಗಿ ದೇವಸ್ಥಾನದ ವ್ಯವಸ್ಥಾಪನಾ‌ ಸಮಿತಿಯ ವಿನಂತಿಸಿದೆ.