ಡೈಲಿ ವಾರ್ತೆ: 30 ಜೂನ್ 2023

ಬೆಂಗಳೂರು: ಜ್ಯುವೆಲ್ಲರಿ ಶಾಪ್ನಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ: ಓರ್ವ ಸಾವು

ಬೆಂಗಳೂರು: ಆಕ್ಸಿಜನ್ ಸಿಲಿಂಡರ್ ಸ್ಫೋಟವಾಗಿ ಓರ್ವ ಸಾವನ್ನಪ್ಪಿರುವಂತಹ ಘಟನೆ ನಗರದ ನಗರತ್ ಪೇಟೆ ಬೀದಿಯಲ್ಲಿ ನಡೆದಿದೆ.

ಜ್ಯುವೆಲ್ಲರಿ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ವಿಷ್ಣು ಮೃತ ವ್ಯಕ್ತಿ.
ಚಿನ್ನ ಮೆಲ್ಟ್ ಮಾಡಲು ಆಕ್ಸಿಜನ್, ಎಲ್ಪಿಜಿ ಬಳಕೆ ವೇಳೆ ಸ್ಫೋಟಗೊಂಡಿದೆ. ಮಾಲೀಕರು ಹೊರಗಿದ್ದು ಕೆಲಸದವರು ಮಾತ್ರ ಅಂಗಡಿಯಲ್ಲಿದ್ದರು. ಆಕ್ಸಿಜನ್ ಸಿಲಿಂಡರ್ ಆಫ್ ಮಾಡದೆ ವಿಷ್ಣು ಊಟಕ್ಕೆ ತೆರಳಿದ್ದ. ಪ್ರೆಸರ್ ಹೆಚ್ಚಾದ ಹಿನ್ನೆಲೆ ಏಕಾಏಕಿ ಸ್ಫೋಟವಾಗಿದೆ.
ತಲೆಗೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವವಾಗಿ ವಿಷ್ಣು ಮೃತಪಟ್ಟಿದ್ದಾನೆ.

ಘಟನೆ ಬಳಿಕ ಜ್ಯುವೆಲ್ಲರಿ ಶಾಪ್ ಮಾಲೀಕನಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.