ಡೈಲಿ ವಾರ್ತೆ:01 ಜುಲೈ 2023

ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಕೆಎಂಸಿ ಆಸ್ಪತ್ರೆಯ ಮೂಳೆ ತಜ್ಞಾ ಡಾ. ಸೂರಿ ಸ್ಥಳದಲ್ಲೇ ಸಾವು

ಉಡುಪಿ: ಮಣಿಪಾಲದ ರಜಾತಾದ್ರಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ವೈದ್ಯ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ತಡ ರಾತ್ರಿ ನಡೆದಿದೆ.

ಮೃತರು ಮಣಿಪಾಲದ ಕಸ್ತೂರ್ಬಾ ಹಾಸ್ಪಿಟಲ್ ಮೂಳೆ ತಜ್ಞಾ ಡಾಕ್ಟರ್ ಸೂರ್ಯ ನಾರಾಯಣ ಯಾನೆ ಡಾಕ್ಟರ್ ಸೂರಿ ಎಂದು ಗುರುತಿಸಲಾಗಿದೆ.

ಹೋಟೆಲ್ ಹಾಟ್ ಅಂಡ್ ಸ್ಪೈಸಿ ಎದುರುಗಡೆ ಕಡಿದಾದ ತಿರುವಿನ್ನಲ್ಲಿ ನಿಯಂತ್ರಣ ತಪ್ಪಿದ ಕಾರ್ ಮೊದಲು ರಸ್ತೆ ವಿಭಜಕೆ ಡಿಕ್ಕಿ ಹೊಡೆದು ನಂತರ 3 ಪಲ್ಟಿಯಾಗಿದ್ದು ಡಾಕ್ಟರ್ ಸೂರ್ಯನಾರಾಯಣ ತಲೆಗೆ ತೀವ್ರ ಗಾಯಗಳಾಗಿ ಸ್ಥಳದಲ್ಲಿ ಮೃತಪಟ್ಟಿರುತಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕಾಗಮಿಸಿದ ಮಣಿಪಾಲ ಪೊಲೀಸರು ಪರಿಶೀಲಿಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.