ಡೈಲಿ ವಾರ್ತೆ: 6 ಜುಲೈ 2023

ಫರಂಗಿಪೇಟೆ : ಜುಲೈ 9 ರಂದು ರಕ್ತದಾನ ಹಾಗೂ ರಾಜ್ಯ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಸನ್ಮಾನ

ಬಂಟ್ವಾಳ : ಪುದು – ಫರಂಗಿಪೇಟೆಯ ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಜಬ್ಬಾರ್ ಮಾರಿಪಳ್ಳ ಇವರ ನೇತೃತ್ವದಲ್ಲಿ ಟ್ರಸ್ಟ್ ನ 11 ನೇ ವಾರ್ಷಿಕೋತ್ಸವದ ಅಂಗವಾಗಿ ರಕ್ತದಾನ ಹಾಗೂ ರಾಜ್ಯ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಸನ್ಮಾನ ಕಾರ್ಯಕ್ರಮವು ಜುಲೈ 9 ರಂದು ಬೆಳಗ್ಗೆ 9 ಕ್ಕೆ ಫರಂಗಿಪೇಟೆಯ ಯಶಸ್ವಿ ಹಾಲ್ ನಲ್ಲಿ ನಡೆಯಲಿದೆ.

ಇದೇ ವೇಳೆ ಪರಿಸರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಹೆಲ್ತ್ ಕಾರ್ಡ್ ವಿತರಣೆ ನಡೆಯಲಿದೆ.

ಪುದು ಗ್ರಾಮ ಪಂಚಾಯತ್ ಹಾಗೂ ಆಸುಪಾಸಿನ ವಿವಿಧ ಗ್ರಾಮಗಳಲ್ಲಿ ಹಲವಾರು ಸಾಮಾಜಿಕ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡು ಪರಿಸರದ ಜನತೆಗೆ ಆಸರೆಯಾಗಿರುವ ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ ರಕ್ತದಾನ ಶಿಬಿರದಲ್ಲಿ ಪರಿಸರದ ಜನತೆ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವ ಮೂಲಕ ಜೀವದಾನದ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸ ಬೇಕು ಎಂದು ಜಿ.ಪಂ. ಮಾಜಿ ಸದಸ್ಯ ಉಮ್ಮರ್ ಫಾರೂಕ್, ಪುದು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಹಾಲಿ ಉಪಾಧ್ಯಕ್ಷ ಇಕ್ಬಾಲ್ ಸುಜೀರ್ ಕರೆ ನೀಡಿದ್ದಾರೆ.