ಡೈಲಿ ವಾರ್ತೆ:14 ಜುಲೈ 2023

ಚಂದ್ರಯಾನ -3 ಉಡಾವಣೆಗೆ ಕ್ಷಣಗಣನೆ: ಶುಭಕೋರಿದ ಸ್ಪೀಕರ್ ಖಾದರ್

ಬೆಂಗಳೂರು: ಚಂದ್ರಯಾನ-3 ಉಡಾವಣೆ ಯಶಸ್ವಿಯಾಗಲಿ ಎಂದು ಸ್ಪೀಕರ್ ಯು.ಟಿ ಖಾದರ್ ಸದನದಲ್ಲಿ ಶುಭ ಹಾರೈಸಿದ್ದಾರೆ.

ಸದನದ ಪರವಾಗಿ ಚಂದ್ರಯಾನ-3ರ ಉಡಾವಣೆ ಯಶಸ್ವಿಯಾಗಲಿ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಂಭ್ರಮದ ಕ್ಷಣಗಳಲ್ಲಿ ನಾವು ಹೆಮ್ಮೆಪಡೋಣ. ಇಸ್ರೋ (ISRO) ಉಡಾವಣೆ ಮಾಡುತ್ತಿರುವ ಚಂದ್ರಯಾನ ಯಶಸ್ವಿ ಆಗಲಿ ಎಂದು ಶುಭಕೋರೋಣ ಎಂದು ಉಲ್ಲೇಖಿಸಿದ್ದಾರೆ.

ಶ್ರೀಹರಿಕೋಟಾದ ಸತೀಶ್ ಧವನ್ ಅಂತರಿಕ್ಷ ಕೇಂದ್ರದಿಂದ ಚಂದ್ರಯಾನ-3 ಉಪಗ್ರಹ ಶುಕ್ರವಾರ (ಇಂದು) ಮಧ್ಯಾಹ್ನ ಉಡಾವಣೆ ಆಗಲಿದೆ. ಬಾಹುಬಲಿ ರಾಕೆಟ್ ಎಂದೇ ಹೆಸರಾದ ಜಿಎಲ್‍ಎಲ್‍ವಿ ಮಾರ್ಕ್ 3 ರಾಕೆಟ್ ಇದನ್ನು ಹೊತ್ತೊಯ್ಯಲಿದೆ. ಚಂದ್ರನ ಮಣ್ಣನ್ನು ಅಧ್ಯಯನ ನಡೆಸಲು ಹಾಗೂ ಚಂದ್ರನ ಕಂಪನಗಳನ್ನು ದಾಖಲಿಸಲಿಸುವ ಉದ್ದೇಶ ಸೇರಿದಂತೆ ಹಲವು ಮಹತ್ವಾಕಾಂಕ್ಷೆಯ ಉದ್ದೇಶದಿಂದ ವಿಜ್ಞಾನಿಗಳು ಈ ಉಪಗ್ರಹ ಉಡಾವಣೆಗೆ ಸಿದ್ಧತೆ ನಡೆಸಿದ್ದಾರೆ.