ಡೈಲಿ ವಾರ್ತೆ:22 ಜುಲೈ 2023

ಮಂಗಳೂರು: ನೈತಿಕ ಪೊಲೀಸ್‌ಗಿರಿ – ವಿದ್ಯಾರ್ಥಿ ಮೇಲೆ ಹಲ್ಲೆ

ಮಂಗಳೂರು: ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ಕಾಲೇಜು ವಿದ್ಯಾರ್ಥಿಯ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ನಡೆದಿದೆ.

ಮಹಮ್ಮದ್ ಹಫೀಸ್ (20) ಹಲ್ಲೆಗೊಳಗಾದ ವಿದ್ಯಾರ್ಥಿ. 6ಮಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಣಂಬೂರು ಬೀಚ್ ಗೆ ವಿಹಾರಕ್ಕೆ ತೆರಳಿದ್ದು, ಈ ವೇಳೆ ಹಿಂಬಾಲಿಸಿಕೊಂಡು ಬಂದ ತಂಡ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದಾರೆ.

ಅನ್ಯಕೋಮಿನ ವಿದ್ಯಾರ್ಥಿಗಳೊಂದಿಗೆ 4 ಮಂದಿ ವಿದ್ಯಾರ್ಥಿನಿಯರು ತೆರಳಿದ್ದು, ಬೀಚ್ ನಿಂದ ಅನ್ಯಕೋಮಿನ ವಿದ್ಯಾರ್ಥಿಗಳನ್ನು ಬೈಕ್ ನಲ್ಲಿ ಹಿಂಬಾಲಿಸಿ ಬಂದ ತಂಡ ಹಲ್ಲೆ ನಡೆಸಿದೆ.

ಇನ್ನು ಗಾಯಗೊಂಡ ವಿದ್ಯಾರ್ಥಿ ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.