ಡೈಲಿ ವಾರ್ತೆ:22 ಜುಲೈ 2023

ಹಿರಿಯಡ್ಕ: ಸ್ಕೂಟರ್ ಗೆ ಬಸ್ ಢಿಕ್ಕಿ ಸವಾರ ಮೃತ್ಯು ಸಹಸವಾರನಿಗೆ ಗಾಯ!

ಹಿರಿಯಡ್ಕ: ಬಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು ಹಿಂಬದಿ ಸವಾರ ಗಾಯಗೊಂಡ ಘಟನೆ ಓಂತಿಬೆಟ್ಟು ಸಭಾಭವನದ ಎದುರು ರಾಷ್ಟ್ರೀಯ ಹೆದ್ದಾರಿ 169 ಎ ರಲ್ಲಿ ಶನಿವಾರ ಇಂದು ಬೆಳಗ್ಗೆ 8.30ರ ಸುಮಾರಿಗೆ ನಡೆದಿರುವ ಬಗ್ಗೆ ವರದಿಯಾಗಿದೆ.

ಮೃತರನ್ನು ಉಡುಪಿಯ ಕೃಷ್ಣ ಪೂಜಾರಿ(60) ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡ ಹಿಂಬದಿ ಸವಾರ, ನಿವೃತ್ತ ಬ್ಯಾಂಕ್ ಉದ್ಯೋಗಿ, ಹಿರಿಯಡ್ಕ ನಿವಾಸಿ ಭೋಜ ಶೆಟ್ಟಿ ಎಂಬವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಉಡುಪಿ ಕಡೆಯಿಂದ ಹಿರಿಯಡ್ಕ ಕಡೆ ಹೋಗುತ್ತಿದ್ದ ಬೈಕಿಗೆ ಎದುರಿನಿಂದ ಬಂದ ಬಸ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಕೃಷ್ಣ ಪೂಜಾರಿ ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.