ಡೈಲಿ ವಾರ್ತೆ:23 ಜುಲೈ 2023

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಮರದ ಕೊಂಬೆ ಬಡಿದು ಮೃತ್ಯು!

ಹಾಸನ: ಬಸ್‍ ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬನಿಗೆ ಮರದ ಕೊಂಬೆ ಬಡಿದು ಮೃತಪಟ್ಟ ಘಟನೆ ಬೇಲೂರಿನ ನಿಡಗೋಡು ಗ್ರಾಮದ ಬಳಿ ನಡೆದಿದೆ.

ಬೇಲೂರಿನಿಂದ – ಮಂಗಳೂರು ಕಡೆಗೆ ಕೆಎ-45 ಎಫ್-0033 ನಂಬರ್‌ ನ ಸಾರಿಗೆ ಬಸ್ ತೆರಳುತ್ತಿತ್ತು. ಈ ವೇಳೆ ಎದುರಿನಿಂದ ಬಂದ ಟಿಪ್ಪರ್‌ ಗೆ ದಾರಿ ಬಿಡುವಾಗ ಈ ದುರ್ಘಟನೆ ಸಂಭವಿಸಿದೆ. ಮೃತನ ಗುರುತು ಪತ್ತೆಯಾಗಿಲ್ಲ. ವ್ಯಕ್ತಿಯ ಮೃತದೇಹವನ್ನು ಬೇಲೂರಿನ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ

ಗ್ರಾಮದ ರಸ್ತೆ ಬದಿಯಲ್ಲಿಯೇ ಬೃಹತ್ ಗಾತ್ರದ ಹಲವಾರು ಮರಗಳಿವೆ. ಈ ರೀತಿಯಲ್ಲಿಯೇ ಮೂರ್ನಾಲ್ಕು ಸಾವುಗಳು ಸಂಭವಿಸಿವೆ. ಮರಗಳನ್ನು ತೆರವುಗೊಳಿಸುವಂತೆ ಮನವಿ ಮಾಡಿದ್ದರು ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಮರಗಳನ್ನು ತೆರವುಗೊಳಿಸಬೇಕು ಇಲ್ಲವಾದಲ್ಲಿ ರಸ್ತೆ ಬಂದ್ ಮಾಡಿ ಮರ ತೆರವು ಮಾಡುವುದಾಗಿ ಸ್ಥಳೀಯರ ಎಚ್ಚರಿಕೆ ನೀಡಿದ್ದಾರೆ.