ಡೈಲಿ ವಾರ್ತೆ:23 ಜುಲೈ 2023

ವರದಿ:- ರಮೀಝ್ ಬಾಳೆಹೊನ್ನೂರು

ಬಾಳೆಹೊನ್ನೂರು – ಕಳಸ ಮಾರ್ಗ‌ ಮಧ್ಯೆ ಬೃಹತ್ ಮರ ಉರುಳಿ ಬಿದ್ದು ಸಂಚಾರ ಅಸ್ತವ್ಯಸ್ತ

ಬಾಳೆಹೊನ್ನೂರು: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಗಾಳಿ ಮಳೆ ಹಿನ್ನೆಲೆ ಬಾಳೆಹೊನ್ನೂರು-ಕಳಸ ಮಾರ್ಗ‌ ಮಧ್ಯೆ ತೆಪ್ಪದಗಂಡಿ ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದಿದೆ ಅಲ್ಲದೆ ಮರದ ಜೊತೆಗೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು ಇದರಿಂದಾಗಿ ಸಂಚಾರ ಅಸ್ತವ್ಯಸ್ತ ಗೊಂಡಿತು.

ಈ ವೇಳೆ ಸ್ಥಳೀಯರು ಹಾಗೂ ಯಾತ್ರಿಕರ ಪರಿಶ್ರಮದಲ್ಲಿ ತೆರವು ಕಾರ್ಯಾಚಾರಣೆ ನಡೆಸಿ ಕ್ರೇನ್ ಮುಖಾಂತರ ರಸ್ತೆಗೆ ಬಿದ್ದ‌ ಎರಡು ಮರಗಳನ್ನು ತೆರವುಗೊಳಿಸಿದರು. ಅಲ್ಲದೆ ಮರಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ಕಂಬಗಳು ನೆಲಕ್ಕುರುಳಿದ್ದವು ಮೆಸ್ಕಾಂ ನ ಸಿಬ್ಬಂದಿಗಳು ಈಗಾಗಲೇ ಧಾವಿಸಿ ದುರಸ್ಥಿ ಕಾರ್ಯಾಚರಣೆ ನಡೆಸಿದರು.