ಡೈಲಿ ವಾರ್ತೆ:23 ಜುಲೈ 2023

ಸುಬ್ರಮಣ್ಯ: ಭಾರೀ ಮಳೆಯಿಂದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ!

ಸುಬ್ರಮಣ್ಯ: ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.

ಲಗೇಜ್ ಕೊಠಡಿ, ಶೌಚಾಲಯ ಸೇರಿದಂತೆ ಎಲ್ಲವೂ ಮುಳುಗಡೆಯಾಗಿದ್ದು, ಭಕ್ತರಿಗೆ ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮಂಜೇಶ್ವರ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಗೂ ಪ್ರವಾಹದ ನೀರು ನುಗ್ಗಿದ್ದು, ವಾಹನ ಸಂಚಾರ ನಿಷೇಧ ಹಾಕಲಾಗಿದೆ. ಕೃಷಿ ತೋಟಗಳಿಗೆ ನುಗ್ಗಿದ್ದು, ರೈತರು ನಷ್ಟದ ಸುಳಿಯಲ್ಲಿ ಸಿಲುಕುವಂತಾಗಿದೆ.
ಮುಂಜಾಗೃತಾ ಕ್ರಮವಾಗಿ ನದಿ ಸಮೀಪ ತೆರಳದಂತೆ ದೇವಾಲಯದ ಭಕ್ತರಿಗೆ ತಹಶೀಲ್ದಾರ್ ರಮೇಶ್ ಬಾಬು ಸೂಚನೆ ನೀಡಿದ್ದಾರೆ. ಸ್ಥಳದಲ್ಲಿ ಪೊಲೀಸರು, ಗೃಹರಕ್ಷಕ ದಳದಿಂದ ಕಾವಲು ನಿಯೋಜಿಸಲಾಗಿದೆ. ಸ್ಥಳದಲ್ಲಿ ಗೃಹರಕ್ಷಕ, ಎಸ್‌ ಡಿಆರ್‌ ಎಫ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ.