ಡೈಲಿ ವಾರ್ತೆ:23 ಜುಲೈ 2023

ಬೈಂದೂರು ತಾಲೂಕಿನ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ನಾಳೆ (ಜು.24) ರಂದು ರಜೆ ಘೋಷಣೆ:ಉಡುಪಿ ಜಿಲ್ಲಾಧಿಕಾರಿ

ಬೈಂದೂರು: ಭಾರಿ ಮಳೆಯಾಗುತ್ತಿರುವ ಕಾರಣ ಸೋಮವಾರ ಬೈಂದೂರು ತಾಲೂಕಿನ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ರಜೆ ಘೋಷಿಸಿದ್ದಾರೆ.

ನಿರಂತರವಾಗಿ ಮಳೆ ಸುರಿಯುತ್ತಿದ್ದು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಅತೀ ಹೆಚ್ಚು ಮಳೆ ವರದಿಯಾಗಿರುವ ಬೈಂದೂರು ತಾಲೂಕಿನಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.