ಡೈಲಿ ವಾರ್ತೆ: 24 ಜುಲೈ 2023

ಕಾರ್ಕಳ:ಬಸ್ ಹಾಗೂ ಟಿಪ್ಪರ್ ನಡುವೆ ಅಪಘಾತ – ಚಾಲಕನಿಗೆ ಗಂಭೀರ ಗಾಯ!

ಕಾರ್ಕಳ: ಬಸ್ಸು ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿ ಬಸ್ಸು ಚಾಲಕ ತೀವ್ರ ಸ್ವರೂಪದಲ್ಲಿ ಗಾಯಗೊಂಡ ಘಟನೆ ಸೋಮವಾರ ಬೆಳಿಗ್ಗೆ ಬೈಲೂರು ಸಮೀಪದ ಜಾರ್ಕಳ ಬಸ್ರಿಶಾಲೆ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಉಡುಪಿಯಿಂದ ಕಾರ್ಕಳ ಕಡೆ ಬರುತ್ತಿದ್ದ ಖಾಸಗಿ ಬಸ್ಸೊಂದು ಕೆಎಸ್ ಆರ್ ಟಿ ಸಿ ಬಸ್ಸನ್ನು ಹಿಂತಿಕುವ ಭರದಲ್ಲಿ ಅತೀ ವೇಗ ಹಾಗೂ ನಿರ್ಲಕ್ಷ್ಯ ರೀತಿಯಲ್ಲಿ ಚಲಾಯಿಸಿ ಬಂದು ಬಸ್ರಿಶಾಲಾ ತಿರುವಿನಲ್ಲಿ ಟಿಪ್ಪರ್ ಗೆ ಡಿಕ್ಕಿ ಹೊಡೆದಿದೆ.
ಇನ್ನು ಅಪಘಾತದ ತೀವ್ರತೆಗೆ ಬಸ್ಸು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಪ್ರಯಾಣಿಕರು ಹಾಗೂ ಟಿಪ್ಪರ್ ಚಾಲಕ ಸಣ್ಣಪುಟ್ಟ ರೀತಿಯಲ್ಲಿ ಗಾಯಗೊಂಡಿದ್ದಾರೆ.