ಡೈಲಿ ವಾರ್ತೆ: 24 ಜುಲೈ 2023

ಹೊನ್ನಾವರ:ಈಜಲು ತೆರಳಿದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು!

ಹೊನ್ನಾವರ: ತಾಲೂಕಿನ ರಾಮತೀರ್ಥಕ್ಕೆ ಈಜಲು ತೆರಳಿದ್ದ ವಿದ್ಯಾರ್ಥಿಯೊರ್ವ ಮೃತಪಟ್ಟ ಘಟನೆ ಜು. 24 ರಂದು ಸೋಮವಾರ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿ ರಾಯಲಕೇರಿ ನಿವಾಸಿಯಾದ ಮಣಿಕಂಠ ಮಂಜುನಾಥ ನಾಯ್ಕ (17) ಎಂದು ಗುರುತಿಸಲಾಗಿದೆ.

ಪಟ್ಟಣದ ಸರ್ಕಾರಿ ಮೋಹನ ಕೆ.ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯುಸಿ ವಿದ್ಯಾರ್ಥಿಯಾಗಿದ್ದು, ಸೋಮವಾರ ಮಳೆಯ ಕಾರಣದಿಂದ ಕಾಲೇಜಿಗೆ ರಜೆ ಇದ್ದ ಕಾರಣ ಈಜಲು ತೆರಳಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಪೋಲೀಸರು ಹಾಗೂ ಸಾರ್ವಜನಿಕರ ಸಹಕಾರದಿಂದ ಶವವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಯ ಬಳಿಕ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.
ಹೊನ್ನಾವರ ಪೋಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.