ಡೈಲಿ ವಾರ್ತೆ:25 ಜುಲೈ 2023

ಉಡುಪಿ ಜಿಲ್ಲೆಯಲ್ಲಿ ಮುಂದುವರಿದ ವರುಣಾರ್ಭಟ: ನಾಳೆ (ಜು.26) ಶಾಲೆ- ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನಾಳೆ (ಬುಧವಾರ)ಉಡುಪಿ ಜಿಲ್ಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ.

ನಿರಂತರ ಮಳೆಯಿಂದಾಗಿ ನದಿ, ಹಳ್ಳಗಳಲ್ಲಿ ಹೆಚ್ಚಿನ ನೀರಿನ ಅರಿವು ಹಾಗೂ ಹೆಚ್ಚು ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆಯ ವರದಿ ಇರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರು ಆದೇಶಿಸಿದ್ದಾರೆ.