ಡೈಲಿ ವಾರ್ತೆ:26 ಜುಲೈ 2023

ಮಣಿಪಾಲ:ಮೂವರು ಗಾಂಜಾ ಪೆಡ್ಲರ್ ವಿದ್ಯಾರ್ಥಿಗಳ ಬಂಧನ!

ಮಣಿಪಾಲ:ಗಾಂಜಾ ಮಾರಾಟಕ್ಕೆ ಸಂಬಂಧಿಸಿ ಮಣಿಪಾಲ ವಿದ್ಯಾರತ್ನ ಹಾಗೂ ಸರಳೇಬೆಟ್ಟುವಿನ ವಸತಿ ಸಮುಚ್ಛಯಗಳಿಗೆ ದಾಳಿ ನಡೆಸಿದ ಮಣಿಪಾಲ ಪೊಲೀಸರು, ಮೂವರು ಗಾಂಜಾ ಪೆಡ್ಲರ್ ವಿದ್ಯಾರ್ಥಿಗಳನ್ನು ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಬಿಹಾರ್ ಪಟ್ನಾದ ಆಯುಶ್‌ರಾಜ್ (21), ಹೈದರಬಾದಿನ ವಿನಯ್ ಕುಮಾರ್ ಸಿಂಗ್(20), ಉತ್ತರ ಪ್ರದೇಶ ಲಕ್ನೋದ ಮಯಾಸ್ ಚಂದೆಲ್ (18) ಬಂಧಿತ ಆರೋಪಿಗಳು. ಇವರೆಲ್ಲ ಮಣಿಪಾಲ ಎಂಐಟಿ ಮೂರನೇ ವರ್ಷದ ಇಂಜಿನಿಯರಿಂಗ್ ಹಾಗೂ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಇವರಿಂದ 1. 10ಲಕ್ಷ ರೂ. ಮೌಲ್ಯದ ಸುಮಾರು 2.100ಕೆ. ಜಿ. ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.