ಡೈಲಿ ವಾರ್ತೆ:26 ಜುಲೈ 2023

ವಿಶ್ವ ಜಾಂಬೂರಿಗೆ ತೆರಳುವ ಬಿ.ಎಂ.ತುಂಬೆ ಅವರಿಗೆ ಹಿದಾಯ ಫೌಂಡೇಶನ್ ನಿಂದ ಬೀಳ್ಕೊಡುಗೆ

ಬಂಟ್ವಾಳ : ದಕ್ಷಿಣ ಕೊರಿಯಾದ ಸೀಮನ್ ಗಾಮ್ ನಲ್ಲಿ 15 ದಿವಸದ ಕಾಲ ನಡೆಯುವ ಸ್ಕೌಟ್ ಮತ್ತು ಗೈಡ್ಸ್ 25 ನೇ ವಿಶ್ವ ಜಾಂಬೂರಿಯಲ್ಲಿ ಭಾಗವಹಿಸಲು ಭಾರತದ ಪ್ರತಿನಿಧಿಯಾಗಿ ತೆರಳುತ್ತಿರುವ ನಿವೃತ್ತ ಶಿಕ್ಷಕರೂ, ಹಿದಾಯ ಫೌಂಡೇಶನ್ ನ ಸದಸ್ಯರೂ ಆಗಿರುವ ಬಿ. ಮೊಹಮ್ಮದ್ ತುಂಬೆ ಅವರನ್ನು ಸನ್ಮಾನಿಸಲಾಯಿತು.

ಹಿದಾಯ ಫೌಂಡೇಶನ್ ಕೇಂದ್ರ ಕಚೇರಿಯಲ್ಲಿ ಫೌಂಡೇಶನ್ ಅಧ್ಯಕ್ಷ ಮುಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿ.ಎಂ.ತುಂಬೆ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಹಿದಾಯ ಫೌಂಡೇಶನ್ ಸ್ಥಾಪಕ ಅಧ್ಯಕ್ಷ ಖಾಸಿಂ ಅಹ್ಮದ್, ಉಪಾಧ್ಯಕ್ಷ ಆಸೀಫ್ ಇಕ್ಬಾಲ್, ಕೋಶಾಧಿಕಾರಿ ಎಫ್.ಎಂ. ಬಶೀರ್, ಆಡಳಿತಧಿಕಾರಿ ಅಬಿದ್ ಅಸ್ಗರ್, ಜೊತೆ ಕಾರ್ಯದರ್ಶಿ ಹಕೀಮ್ ಕಲಾಯಿ, ಟ್ರಸ್ಟಿ ಝಿಯಾದ್ದಿನ್, ದುಬೈ ಘಟಗ ದ ಅಖ್ತರ್ ಹುಸೈನ್ ಉಪಸ್ಥಿತರಿದ್ದರು.