ಡೈಲಿ ವಾರ್ತೆ:28 ಜುಲೈ 2023

ವರದಿ: ವಿದ್ಯಾಧರ ಮೊರಬಾ

ಅಂಕೋಲಾದಲ್ಲಿ ಖಾಸಗಿ ಇಂಜಿನಿಯರ ಬಾವಿಗೆ ಹಾರಿ ಆತ್ಮಹತ್ಯೆ !


ಅಂಕೋಲಾ : ಪಟ್ಟಣದ ಪಿ.ಎಲ್.ಡಿ.ಬ್ಯಾಂಕ್ (ಭೂ ಅಭಿವೃದ್ಧಿ ಬ್ಯಾಂಕ್) ಆವರಣದಲ್ಲಿರುವ ಕೂಲಿಕಾರರ ಸೊಸೈಟಿಗೆ ಸಂಬಂಧಿಸಿದ ಬಾವಿಯಲ್ಲಿ ವ್ಯಕ್ತಿಯೊಬ್ಬನು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.

ಪಟ್ಟಣದ ಶ್ರೀ ಶಾಂತಾದುರ್ಗಾ ದೇವಸ್ಥಾನದ ಹತ್ತಿರದ ನಿವಾಸಿ ರಾಮಚಂದ್ರ ಬಾಬಣ ಪೆಡ್ನೇಕರ (62) ಎಂಬಾತನೇ ಆತ್ಮಹತ್ಯೆಗೆ ಶರಣಾದ ಖಾಸಗಿ ಇಂಜಿನೀಯರ್. ಇವರು ಕೆಲ ವರ್ಷಗಳ ಹಿಂದೆ ಪಟ್ಟಣ ಪಂಚಾಯತ್‍ನಲ್ಲಿ ದಿನಗೂಲಿ ಇಂಜಿನೀಯರಾಗಿ ಸೇವೆ ಸಲ್ಲಿಸಿದರು. ಇವರಿಗೆ ಕಳೆದ ನಾಲ್ಕು ದಿನಗಳ ಹಿಂದೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಘಟನೆ ಕುರಿತು ಆತನ ಪತ್ನಿ ಛಾಯಾ ಪೆಡ್ನೇಕರ ಪೊಲೀಸ ದೂರು ನೀಡಿದ್ದಾರೆ.

ಇಲ್ಲಿಯ ಅಗ್ನಿಶಾಮಕ ದಳದವರು ಘಟನಾ ಸ್ಥಳಕ್ಕೆ ಬಂದು ಬಾವಿಯಿಂದ ಮೃತದೇಹವನ್ನು ಮೇಲೆತ್ತಿ ದ್ದರು. ಇದನ್ನು ಸಾಮಾಜಿಕ ಕಾರ್ಯಕರ್ತ ವಿಜಯಕುಮಾರ ನಾಯ್ಕ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿದರು. ಪಿಐ ಸಂತೋಷ ಶೆಟ್ಟಿ ಮಾರ್ಗದರ್ಶನದಲ್ಲಿ ಪಿಎಸ್‍ಐ ಗೀತಾ ಶಿರಸಿಕರ್ ಪ್ರಕರಣ ದಾಖ ಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.