ಡೈಲಿ ವಾರ್ತೆ:09 ಆಗಸ್ಟ್ 2023

ಕೋಟ ಗ್ರಾ. ಪಂ. ನಲ್ಲಿ ಸ್ವಚ್ಛ ಸರ್ವೇಕ್ಷಣ ಪೂರ್ವಭಾವಿ ಸಭೆ ಹಾಗೂ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮ

ಕೋಟ: ಸ್ವಚ್ಛ ಸರ್ವೇಕ್ಷಣ ಪೂರ್ವಭಾವಿ ಸಭೆ ಹಾಗೂ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮವು ಆ. 8 ರಂದು ಕೋಟ ಪಂಚಾಯತ್ ಸಭಾಂಗಣದಲ್ಲಿ ಅಧ್ಯಕ್ಷ ಅಜಿತ್ ದೇವಾಡಿಗರ ಅಧ್ಯಕ್ಷತೆಯಲ್ಲಿ ನಡೆಯಿತು.

ತಾಲೂಕು ಸಂಯೋಜಕ ಸಹಾಯಾಧಿಕಾರಿಯದ ಸಂದೇಶ ಶೆಟ್ಟಿಯವರು ಸ್ವಚ್ಛ ಸರ್ವೇಕ್ಷಣೇಯ ಬಗ್ಗೆ ಸಮಗ್ರ ಮಾಹಿತಿಗಳನ್ನು ನೀಡಿದರು. ಕೋಟ ಕಮ್ಯೂನಿಟಿ ಹೆಲ್ತ್ ಸೆಂಟರ್ ನ ಆರೋಗ್ಯ ಅಧಿಕಾರಿಯಾದ ಡಾ.ವಿಶ್ವನಾಥ ಹೆಗಡೆ ಆಜಾದಿ ಕಾ ಅಮೃತ್ ಮಹೋತ್ಸವದ ಪ್ರತಿಜ್ಞೆ ವಿಧಿ ಬೋಧಿಸಿದರು.

ಈ ಸಂಧರ್ಭದಲ್ಲಿ ಉಪಾಧ್ಯಕ್ಷೆ ಜಯಂತಿ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್ ವ್ಯಾಪ್ತಿಯ ಎಲ್ಲಾ ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಸಂಘದ ಸದಸ್ಯರು, ಎಸ್.ಎಲ್.ಆರ್.ಎಂ ಘಟಕದವರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಸತೀಶ್ ಅವರು ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತಿಸಿದರು. ಕಾರ್ಯದರ್ಶಿ ಶೇಖರ್ ಮರವಂತೆ ವಂದಿಸಿದರು.