ಡೈಲಿ ವಾರ್ತೆ:10 ಆಗಸ್ಟ್ 2023

ರಾಷ್ಟ್ರ ಪ್ರೇಮ ದೇಶದೆಲ್ಲಡೆ ಪಸರಿಸಲಿ – ಶ್ರೀಮತಿ ಪೂರ್ಣಿಮಾ

ಕೋಟ : ಸ್ವಾತಂತ್ರ್ಯಕ್ಕಾಗಿ ನಮ್ಮ ಪೂರ್ವಜರ ತ್ಯಾಗ ಬಲಿದಾನದಿಂದಾಗಿ ಪರಕೀಯರಿಂದ ಮುಕ್ತಿ ಪಡೆಯಲು ಸಾಧ್ಯವಾಯಿತು, ಪ್ರತಿಯೊಬ್ಬ ಭಾರತೀಯನು ತನ್ನ ದೇಶದ ಮೇಲೆ ಪ್ರೀತಿಯನ್ನಿರಿಸಿಕೊಂಡು ತಮ್ಮ ಮಕ್ಕಳಿಗೂ ಚಿಕ್ಕ ವಯಸ್ಸಿನಲ್ಲಿಯೇ ರಾಷ್ಟ್ರ ಪ್ರೇಮದ ಬಗ್ಗೆ ಅರಿವು ಮೂಡಿಸಬೇಕು ಧರ್ಮ, ಭಾಷೆ, ಸಂಸ್ಕøತಿ ಆಚರಣೆ ಸಂಪ್ರದಾಯಗಳು ವಿಭಿನ್ನವಾದರೂ ನಾವೆಲ್ಲರೂ ಒಂದು ಎಂದು ಸಾರುವ ದೇಶ ಎನ್ನುವ ಶಬ್ಧದಲ್ಲಿ ಭಾರತೀಯರ ಭಾವನೆ ಅಡಗಿದೆ ಎಂದರು, ಎಂದು ಉಡುಪಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ ಅವರು ಹೇಳಿದರು.

ಅವರು ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ(ರಿ) ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ , ಜೆಸಿಐ ಕಲ್ಯಾಣಪುರ, ಕೋಟತಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ, ಯು ಚಾನೆಲ್ ಸಹಯೋಗದಲ್ಲಿ ನಡೆದ ಸಮೂಹ ದೇಶಭಕ್ತಿ ಗೀತೆ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ದಿನೇಶ್ ವಹಿಸಿದ್ದರು.
ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀ ವಾಸು ಪೂಜಾರಿ, ಕಾರಂತ ಪ್ರತಿಷ್ಠಾನದ ಟ್ರಸ್ಟಿ ಶ್ರೀ ಸುಬ್ರಾಯ ಆಚಾರ್ಯ, ಜೆಸಿಐ ಕಲ್ಯಾಣಪುರ ಅಧ್ಯಕ್ಷೆ ಶ್ರೀಮತಿ ಅನಿತಾ ನರೇಂದ್ರ, ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಮಾಹಿತಿ ಕೇಂದ್ರದ ಮೇಲ್ವಿಚಾರಕಿ ಶ್ರೀಮತಿ ಶೈಲಜಾ ಕೆ.ಎನ್, ಜ್ಯೂನಿಯರ್ ಜೆಸಿಐ ಅಧ್ಯಕ್ಷ ಶ್ರೀ ನಿರಂತರ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪ್ರತಿಷ್ಠಾನದ ಕಾರ್ಯದರ್ಶಿ ಶ್ರೀ ನರೇಂದ್ರ ಕುಮಾರ್ ಕೋಟ ನಿರೂಪಿಸಿ ಪ್ರಸ್ತಾಪಿಸಿದರು.