ಡೈಲಿ ವಾರ್ತೆ:18 ಆಗಸ್ಟ್ 2023

ಕುಂದಾಪುರ:ಪ್ರೌಢಶಾಲಾ ವಿಭಾಗದ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟದ ಜೊತೆಗೆ ವಾರದಲ್ಲಿ 2 ದಿನ ಮೊಟ್ಟೆ/ಬಾಳೆಹಣ್ಣು/ಚಿಕ್ಕಿ ನೀಡುವ ಕಾರ್ಯಕ್ರಮಕ್ಕೆ ಉಡುಪಿ ಮಾನ್ಯ ಜಿಲ್ಲಾಧಿಕಾರಿ ವಿದ್ಯಾಕುಮಾರಿಯಿಂದ ಚಾಲನೆ

ಕುಂದಾಪುರ: ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮಕ್ಕಳಿಗೆ ಪ್ರಧಾನಮಂತ್ರಿ ಪೋಷಣ್ ಶಕ್ತಿ ಯೋಜನೆಯಡಿಯಲ್ಲಿ ಮಧ್ಯಾಹ್ನದ ಬಿಸಿ ಊಟದ ಜೊತೆಗೆ ವಾರದಲ್ಲಿ 2 ದಿನ ಮೊಟ್ಟೆ/ಬಾಳೆಹಣ್ಣು/ಚಿಕ್ಕಿ ನೀಡುವ ಕಾರ್ಯಕ್ರಮವನ್ನು ಮಾನ್ಯ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಕುಂದಾಪುರದ ಶಾಸಕರಾದ ಕಿರಣ್ ಕೊಡ್ಗಿ, ಸಹಾಯಕ ಕಮೀಷನರ್ ರಶ್ಮಿ ಎಸ್ ಆರ್. , ಡಿ.ಎಫ್.ಓ . , ಕ್ಷೇತ್ರ ಶಿಕ್ಷಣಾಧಿಕಾರಿ ಶೋಭ ಶೆಟ್ಟಿ, ಪ್ರಾಂಶುಪಾಲರಾದ ಬಿ.ಜಿ.ರಾಮಕೃಷ್ಣ, ಉಪ ಪ್ರಾಂಶುಪಾಲರಾದ ಕಿರಣ್ ಹೆಗ್ಡೆ, ಪುರಸಭಾ ಸದಸ್ಯರಾದ ಮೋಹನದಾಸ್ ಶೆಣೈ., ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಸತೀಶ್ ಕುಮಾರ್ ಉಪಸ್ಥಿತರಿದ್ದರು.