ಡೈಲಿ ವಾರ್ತೆ:21 ಆಗಸ್ಟ್ 2023

ಹುಣಸೂರು:ಸ್ಕೂಟರ್ ಗೆ ಅಪರಿಚಿತ ವಾಹನ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು

ಹುಣಸೂರು:ಸ್ಕೂಟರ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಆ.21 ರಂದು ಸೋಮವಾರ ಹೆದ್ದಾರಿಯ ಮಲ್ಲಿನಾಥಪುರದ ಬಳಿ ನಡೆದಿದೆ.

ಮೃತಪಟ್ಟ ದುರ್ದೈವಿ ಹುಣಸೂರು ತಾಲೂಕಿನ ಸೋಮನಹಳ್ಳಿ ನಿವಾಸಿ ಜವರ ಶೆಟ್ಟರ ಪುತ್ರ ಗಿರೀಶ್ (60) ಎಂದು ಗುರುತಿಸಲಾಗಿದೆ.

ಬಿಳಿಕೆರೆ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.