



ಡೈಲಿ ವಾರ್ತೆ:26 ಆಗಸ್ಟ್ 2023


ವರದಿ: ರವಿತೇಜ ಕಾರವಾರ
ಕಾರವಾರ: ಅಕ್ರಮವಾಗಿ ಜಾನುವಾರು ಸಾಗಾಟ – ಐವರ ಬಂಧನ, 18 ಜಾನುವಾರು ರಕ್ಷಣೆ
ಕಾರವಾರ: ತಾಲೂಕಿನ ಅರ್ಗಾದ ಸೀಬರ್ಡ್ ನೌಕಾನೆಲೆಯ ಮುಖ್ಯದ್ವಾರದ ಮೂಲಕ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಸ್ಥಳೀಯರು ಹಾಗೂ ವಿವಿಧ ಸಂಘಟನೆಯವರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಶನಿವಾರ ನಡೆದಿದೆ.
ಸುಮಾರು 18 ಜಾನುವಾರುಗಳನ್ನು ಲಾರಿಯೊಂದರಲ್ಲಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ದೊರೆತ ತಕ್ಷಣ ಕಾಯ್ಪçವೃತ್ತರಾದ ಸ್ಥಳೀಯ ಮುಖಂಡರು, ಬಜರಂಗದಳ ಕಾರ್ಯಕರ್ತರು ವಾಹನವನ್ನು ತಡೆದಿ ಪರಿಶೀಲಿಸಿದ್ದಾರೆ.
ಈ ವೇಳೆ ಅದರಲ್ಲಿ ಅಮಾನವೀಯ ರೀತಿಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿರುವುದು ಕಂಡು ಬಂದಿದೆ. ಲಾರಿಯಲ್ಲಿದ್ದ ಐವರು ತಾವು ಗುಲ್ಬರ್ಗಾದ ಗೋಶಾಲೆಯೊಂದಕ್ಕೆ ತೆಗೆದುಕೊಂಡು ಹೋಗುತ್ತಿರುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಯಾವುದೇ ಅಧಿಕೃತ ದಾಖಲೆಗಳು ಇಲ್ಲದ ಕಾರಣ ಸ್ಥಳಕ್ಕೆ ಪೊಲೀಸರನ್ನು ಕರೆಸಿ ಜಾನುವಾರು ಸಮೇತ ವಾಹನ ಹಾಗೂ ಐವರು ಆರೋಪಿಗಳನ್ನು ಅವರಿಗೆ ಒಪ್ಪಿಸಿದ್ದಾರೆ.