ಡೈಲಿ ವಾರ್ತೆ:31 ಆಗಸ್ಟ್ 2023

ಕೋಟತಟ್ಟು ಎಸ್ ಎಲ್ ಆರ್ ಎಂ ಘಟಕ ಬೆಂಕಿಗಾಹುತಿ.!

ಕೋಟ: ಕೋಟತಟ್ಟು ಗ್ರಾಮಪಂಚಾಯತ್ ನ ಎಸ್ಎಲ್ಆರ್ ಎಂ ಘಟಕ ಬೆಂಕಿ ಅವಗಡ ಸಂಭವಿಸಿದೆ.
ಗುರುವಾರ ರಾತ್ರಿ 7.30ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಘಟಕದಲ್ಲಿದ್ದ ಬಾರಿ ಪ್ರಮಾಣದ ತ್ಯಾಜ್ಯ ಸುಟ್ಟು ಭಸ್ಮವಾಗಿದೆ.

ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಪುತ್ರನ್ ಕೋಟ ಆರಕ್ಷಕ ಠಾಣೆ ಹಾಗೂ ಸ್ಥಳೀಯಾಡಳಿತಕ್ಕೆ ಮಾಹಿತಿ ನೀಡಿದ್ದು ಕೋಟ ಆರಕ್ಷಕ ಠಾಣಾಧಿಕಾರಿ ಶಂಭುಲಿಂಗಯ್ಯ ಅಗ್ನಿಶಾಮಕ ದಳ ಮಾಹಿತಿ ನೀಡಿದರು.

ಸ್ಥಳಕ್ಕೆ ದೌಡಾಯಿಸಿದ ಕುಂದಾಪುರ ಅಗ್ನಿಶಾಮಕ ದಳ ಬೆಂಕಿ ಆರಿಸುವಲ್ಲಿ ಯಶಸ್ವಿಯಾಯಿತು. ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್, ಎಲ್ಲಾ ಪಂಚಾಯತ್ ಸದಸ್ಯರು, ಎಸ್ ಎಲ್ ಆರ್ ಎಂ ಘಟಕದ ಮುಖ್ಯಸ್ಥರು, ಸ್ಥಳೀಯರು ಬೆಂಕಿ ಆರಿಸುವಲ್ಲಿ ಸಹಕರಿಸಿದರು.