ಡೈಲಿ ವಾರ್ತೆ:01 ಸೆಪ್ಟೆಂಬರ್ 2023

ವರದಿ : ವಿದ್ಯಾಧರ ಮೊರಬಾ

ಅಂಕೋಲಾ: ಸೆ.5 ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಆಮಂತ್ರಣ ಪತ್ರಿಕೆ ಬಿಡುಗಡೆ



ಅಂಕೋಲಾ : ಜಿಪಂ., ಸಾರ್ವಜನಿಕ ಶಿಕ್ಷಣ ಇಲಾಖೆ, ಇಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಿಕ್ಷಕರ ದಿನಾಚರಣೆ ಸಮಿತಿ ಹಾಗೂ ಅಂಕೋಲಾ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಇವರ ಸಂಯುಕ್ತ ಆಶ್ರಯದಲ್ಲಿ ಅಂಕೋಲಾ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರವನ್ನು ಸೆ.5 ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಸ್ವಾತಂತ್ರ್ಯ ಸಂಗ್ರಾಮ ಸ್ಮಾರಕ ಭವನದಲ್ಲಿ ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆಸಲಾಗುತ್ತದೆ ಎಂದು ಬಿಇಓ ಮಂಗಳಲಕ್ಷ್ಮೀ ಪಾಟೀಲ ಹೇಳಿದರು.

ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಗುರುವಾರ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಅವರು ಮಾತ ನಾಡಿ, ಸಭಾಕಾರ್ಯಕ್ರಮವನ್ನು ಶಾಸಕ ಸತೀಶ ಸೈಲ್ ಉದ್ಘಾಟಿಸಲಿದ್ದಾರೆ. ತಾಪಂ.ಆಡಳಿತಾಧಿಕಾರಿ ನಾಗೇಶ ರಾಯ್ಕರ ಅಧ್ಯಕ್ಷತೆ ವಹಿಸಲಿದ್ದು, ಸಹಾಯಕ ಆಯುಕ್ತೆ ಕಲ್ಯಾಣ ಕಾಂಬಳೆ, ತಹಸೀಲ್ದಾರ್ ಅಶೋಕ ಭಟ್, ಅಂಕೋಲಾ ಅರ್ಬನ್ ಬ್ಯಾಂಕಿನ ಉಪಾಧ್ಯಕ್ಷ ಗೋವಿಂದರಾಯ ನಾಯ್ಕ ಮುಖ್ಯ ಅತಿ ಥಿಗಳಾಗಿ ಪಾಲ್ಗೊಳ್ಳಲಿದ್ದು, ವಿಶ್ರಾಂತ ಉಪನ್ಯಾಸಕಿ ಹೊನ್ನಮ್ಮ ನಾಯಕ ಉಪನ್ಯಾಸ ನೀಡಲಿದ್ದಾರೆ.

ಪ್ರೌಢ ಶಾಲಾ ಶಿಕ್ಷಕರು ಹಾಗೂ ಈ ವರ್ಷದಿಮದ ಪ.ಪೂ ಕಾಲೇಜು ಉಪನ್ಯಾಸಕರಿಗೆ ಮತ್ತು ಪ್ರಶಸ್ತಿ ವಿಜೇತ ಶಿಕ್ಷಕರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಿವುದು ಹಾಗೂ ಇತ್ತೀಚೆಗೆ ಅಗಲಿದ ಶಿಕ್ಷಕರ ಸೇವೆಯನ್ನು ಸ್ಮರಿಸಿ ಅವರ ಕುಟುಂಬ ವರ್ಗದವರಿಗೆ ನೆನಪಿನ ಕಾಣ ಕೆ ನೀಡಿ ಗೌರವಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಹರ್ಷಿತಾ ನಾಯಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ ಜಿ.ನಾಯಕ ಹೊಸ್ಕೇರಿ, ಕಾರ್ಯದರ್ಶಿ ರಾಜು ನಾಯಕ, ಸರ್ಕಾರಿ ಪಪೂ ಕಾಲೇಜಿನ ಉಪನ್ಯಾಸಕ ಮಹೇಶ ನಾಯಕ ಹಿಚ್ಕಡ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ.ಟಿ.ನಾಯಕ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಾಲಚಂದ್ರ ನಾಯಕ, ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭಾಕರ ಬಂಟ, ಶಿಕ್ಷಣ ಸಂಯೋಜಕರಾದ ರಚನಾ ನಾಯಕ, ಬಿ.ಎಲ್.ನಾಯ್ಕ ಉಪಸ್ಥಿತರಿದ್ದರು.