ಡೈಲಿ ವಾರ್ತೆ:17 ಸೆಪ್ಟೆಂಬರ್ 2023

✒️ಓಂಕಾರ ಎಸ್. ವಿ. ತಾಳಗುಪ್ಪ

ಸೊರಬ: ಕೆರೆಯಲ್ಲಿ ಎತ್ತುಗಳ ಮೈ ತೊಳೆಯಲು ಹೋಗಿ ಆಕಸ್ಮಿಕ ಕಾಲು ಜಾರಿಬಿದ್ದು ಕುಂಸಿ ಗ್ರಾಮದ ರೈತ ಮೃತ್ಯು.!

ಸೊರಬ: ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕು ಕುಂಸಿ ಗ್ರಾಮದ ರೈತನೋರ್ವ ಕೆರೆಯಲ್ಲಿ ಎತ್ತುಗಳ ಮೈ ತೊಳೆಯಲು ಹೋಗಿ ಆಕಸ್ಮಿಕ ಕಾಲು ಜಾರಿಬಿದ್ದು ಮೃತಪಟ್ಟ ಘಟನೆ ಭಾನುವಾರ ನಡೆದಿದೆ.

ಮೃತ ದುರ್ದೈವಿ ಕುಂಸಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ (32) ಎಂದು ಗುರುತಿಸಲಾಗಿದೆ.

ಇಂದು ಮುಂಜಾನೆ ರೈತ ತನ್ನ ಎತ್ತುಗಳನ್ನು ಕೆರೆಯಲ್ಲಿ ಮೈ ತೊಳೆಯಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಯಲ್ಲಿ ಬಿದ್ದು ಮೃತಪಟ್ಟಿದ್ದು, ಅಗ್ನಿಶಾಮಕ ದಳದ ಅಧಿಕಾರಿ ಮಹಾಬಲೇಶ್ವರ ಹಾಗೂ ಸಹ ಸಿಬ್ಬಂದಿಗಳು ಕೆರೆಯಲ್ಲಿ ಮೃತಪಟ್ಟಿದ್ದ ರೈತನ ಮೃತ ದೇಹವನ್ನು ಕೆರೆಯಿಂದ ಮೇಲೆತ್ತಿ ಕಾನೂನು ಕ್ರಮದೊಂದಿಗೆ ಕುಟುಂಬಕ್ಕೆ ಮೃತ ದೇಹವನ್ನು ಹಸ್ತಾಂತರ ಮಾಡಿರುವ ಮಾಹಿತಿ ಲಭ್ಯವಾಗಿದೆ.

ಮೃತರು ಪತ್ನಿ ಹಾಗೂ ಎರಡು ಅಕ್ಕಂದಿರನ್ನು ಅಗಲಿದ್ದಾರೆ.
ರೈತ ಮಲ್ಲಿಕಾರ್ಜುನರ ನಿಧನಕ್ಕೆ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿ ಸರ್ಕಾರದಿಂದ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮೃತ ಮಲ್ಲಿಕಾರ್ಜುನ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.