ಡೈಲಿ ವಾರ್ತೆ:30 ಸೆಪ್ಟೆಂಬರ್ 2023

5 ವರ್ಷದ ಬಾಲಕಿ ಆಟವಾಡುವಾಗ ಕಾಲು ಜಾರಿ ನಾಲೆಯಲ್ಲಿ ಬಿದ್ದು ನೀರುಪಾಲು!

ಹಾಸನ: ನಾಲೆಯಲ್ಲಿ ಕಾಲುಜಾರಿ ಬಿದ್ದು ಬಾಲಕಿಯೊಬ್ಬಳು ನೀರುಪಾಲಾಗಿರುವ ಘಟನೆ ಹಾಸನದ ಅರಕಲಗೂಡು ತಾಲೂಕಿನ ಮಧುರನಹಳ್ಳಿಯಲ್ಲಿ ನಡೆದಿದೆ.

ರೇವಣ್ಣ ಹಾಗೂ ಭಾಗ್ಯ ದಂಪತಿಯ ಮಗಳು ಸುಪ್ರೀತಾ (5) ಮೃತ ಬಾಲಕಿ ಎಂದು ಗುರುತಿಸಲಾಗಿದೆ.
ಶುಕ್ರವಾರ ಕರ್ನಾಟಕ ಬಂದ್ ಹಿನ್ನಲೆ ಶಾಲೆಗೆ ರಜೆ ಇದ್ದದ್ದರಿಂದ ಮಕ್ಕಳೊಂದಿಗೆ ಹಾರಂಗಿ ಬಲದಂಡೆ ನಾಲೆಗೆ ಆಟವಾಡುವಾಡಲು ಹೋಗಿದ್ದಾಗ ಈ ಘಟನೆ ಸಂಭವಿಸಿದೆ.

ಈ ಸಂಬಂಧ ಅರಕಲಗೂಡು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.