ಡೈಲಿ ವಾರ್ತೆ: 01/OCT/2023

ಕೆ ಎಸ್ ಟಿ ಎ ಕುಂದಾಪುರ ನಗರ ಸಮಿತಿಯ ಅಧ್ಯಕ್ಷರಾಗಿ ಗೋಪಾಲ ಆಯ್ಕೆ

ಕುಂದಾಪುರ :ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ನ ಕುಂದಾಪುರ ನಗರ ಸಮಿತಿಯ ಕಾರ್ಯಕಾರಿ ಸಮಿತಿ ಸಭೆಯು ಅ. 1ರ ಆದಿತ್ಯವಾರ ನಗರದ ಬಿ ಆರ್ ರಾಯರ ಹಿಂದೂ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಿತು. ನಗರ ಸಮಿತಿ ಅಧ್ಯಕ್ಷ ರಾಘವೇಂದ್ರ ಸಭಾಧ್ಯಕ್ಷತೆ ವಹಿಸಿದ್ದರು.

ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿ, ನಗರ ಸಮಿತಿಯ ನೂತನ ಅಧ್ಯಕ್ಷರಾಗಿ, ಡಿವೈನ್ ಮೆನ್ಸ್ ವೇರ್ ನ ಗೋಪಾಲ ಸರ್ವಾನುಮತದಿಂದ ಆಯ್ಕೆಯಾದರು. ನೂತನ ಸಂಘಟನಾ ಕಾರ್ಯದರ್ಶಿಗಳಾಗಿ ಮಂಜುನಾಥ, ವಿಜಯ ಮತ್ತು ಅಶೋಕ ಆಯ್ಕೆಗೊಂಡರು. ಈ ಸಂದರ್ಭದಲ್ಲಿ ಸದಸ್ಯರಿಗೆ ಗುರುತುಪತ್ರ ಮತ್ತು ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸಲಾಯಿತು.

ಸಭೆಯಲ್ಲಿ ಕುಂದಾಪುರ ಕ್ಷೇತ್ರ ಸಮಿತಿಯ ಅಧ್ಯಕ್ಷ ರಾಜೀವ ಪೂಜಾರಿ, ಪ್ರಧಾನ ಕಾರ್ಯದರ್ಶಿ ಹೇಮಾ ರಾಮಚಂದ್ರ, ಕೋಶಾಧಿಕಾರಿ ಅರುಣ ಖಾರ್ವಿ, ನಗರ ಸಮಿತಿಯ ಪ್ರಧಾನ ಕಾರ್ಯದರ್ಶಿ ಕುಸುಮ, ಕೋಶಾಧಿಕಾರಿ ರಾಮಕೃಷ್ಣ ಇನ್ನಿತರರು ಪಾಲ್ಗೊಂಡಿದ್ದರು. ನಿರ್ಗಮಿತ ಅಧ್ಯಕ್ಷ ರಾಘವೇಂದ್ರ, ನೂತನ ಅಧ್ಯಕ್ಷ ಗೋಪಾಲರಿಗೆ ಅಧಿಕಾರ ಹಸ್ತಾಂತರಿಸಿ ಅಭಿನಂದಿಸಿದರು.
—-
(ಫೋಟೊ ಇದೆ)