ಡೈಲಿ ವಾರ್ತೆ: 22/OCT/2023

ಹೆಬ್ರಿ: ನದಿಯಲ್ಲಿ ಸ್ನಾನಕ್ಕೆ ಇಳಿದ ಯುವಕರಿಬ್ಬರು ನೀರಲ್ಲಿ ಮುಳುಗಿ ಮೃತ್ಯು.!

ಹೆಬ್ರಿ: ನದಿಯಲ್ಲಿ ಸ್ನಾನ ಮಾಡುತ್ತಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹೆಬ್ರಿ ಸಮೀಪದ ಮತ್ತಾವು ಎಂಬಲ್ಲಿ ಅ.21ರಂದು ಸಂಜೆ ನಡೆದಿದೆ.

ಕರ್ಜೆ ನಿವಾಸಿ ಉಮೇಶ್ ಶೆಟ್ಟಿ(48) ಹಾಗೂ ಚಾರಾ ಹುರ್ತುಕೆ ನಿವಾಸಿ ಪ್ರಸ್ತುತ್ ಹೆಗ್ಡೆ(21) ಮೃತ ದುರ್ದೈವಿ. ಇವರಿಬ್ಬರು ನದಿಗೆ ಸ್ನಾನಕ್ಕೆಂದು ಹೆಬ್ರಿ ಸಮೀಪದ ಮುತ್ತಾವು ಎಂಬಲ್ಲಿಗೆ ತೆರಳಿದ್ದರು. ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆ ಮನೆಯವರು ಮೊಬೈಲ್ ಫೋನ್ ಗೆ ಕರೆ ಮಾಡಿದ್ದಾರೆ. ಆದರೆ, ಇಬ್ಬರೂ ಕೂಡ ಕರೆ ಸ್ವೀಕರಿಸದ ಕಾರಣ ಹೆಬ್ರಿ ಪೊಲೀಸರ ಸಹಾಯದಿಂದ ಲೊಕೇಶನ್ ಪತ್ತೆ ಹಚ್ಚಿ ಹುಡುಕಾಟ ನಡೆಸಿದಾಗ ಇಬ್ಬರ ಮೃತ ದೇಹ ನದಿಯಲ್ಲಿ ಪತ್ತೆಯಾಗಿದೆ.

ಮೃತ ಪ್ರಸ್ತುತ್ ಹೆಗ್ಡೆ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದರು. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.