ಡೈಲಿ ವಾರ್ತೆ: 26/OCT/2023

ಮಂಗಳಾ ಕ್ರೀಡಾಂಗಣದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟನೆ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ , ಬಂಟ್ವಾಳ ಹಾಗೂ ತುಂಬೆ ಪ್ರೌಢಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ 2023 – 24 ರ ಬಂಟ್ವಾಳ ತಾಲೂಕು ಕ್ರೀಡಾಕೂಟವು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಗುರುವಾರ ಉದ್ಘಾಟನೆಗೊಂಡಿತು.

ಪಂದ್ಯಾಟವನ್ನು ಉದ್ಘಾಟಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಮಾತನಾಡಿ, ಗೆಲುವು ಎನ್ನುವುದು ಎಲ್ಲರಿಂದಲೂ ಸಾಧ್ಯವಾಗದು, ಆದರೂ ಪ್ರಯತ್ನ ಬಹಳ ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶ್ರಮ ವಹಿಸಬೇಕಾಗುವುದು ಅಗತ್ಯವಾಗುತ್ತದೆ ಎಂದು ಅವರು
ಬಂಟ್ವಾಳ ತಾಲೂಕಿಗೆ ಸುಸಜ್ಜಿತ ಕ್ರೀಡಾಂಗಣಕ್ಕಾಗಿ ನೂರು ಕೋಟಿ ರೂಪಾಯಿಗಳ ಅನುದಾನಕ್ಕಾಗಿ ‘ಕೇಲ್ ಇಂಡಿಯಾ’ ಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದು ಶೀಘ್ರವಾಗಿ ಮಂಜೂರುಗೊಳ್ಳುವಂತೆ ತಾನು ಪ್ರಯತ್ನಿಸುವೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಬಿ. ಅಬ್ದುಲ್ ಸಲಾಂ ಅವರು ಮಾತನಾಡಿ ಕ್ರೀಡೆ ಎನ್ನುವುದು ಆರೋಗ್ಯಪೂರ್ಣ ಸ್ಪರ್ಧೆಯಾಗಿದ್ದು ಶಿಸ್ತು ಮತ್ತು ಸಂಯಮವನ್ನು ಕಲಿಸಿಕೊಡುತ್ತದೆ. ಪ್ರತಿಭೆಯನ್ನು ಪ್ರದರ್ಶಿಸಲು ಒಳ್ಳೆಯ ವೇದಿಕೆಯಾಗಿ ಕ್ರೀಡಾ ಕ್ಷೇತ್ರ ಸಹಕರಿಸುತ್ತದೆ. ಕ್ರೀಡಾಕೂಟವೆನ್ನುವುದು ಒಂದು ಸ್ಮರಣೀಯ ಕ್ಷಣಗಳಾಗಿ ಉಳಿಯುತ್ತದೆ ಎಂದರು.

ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ * ಧ್ವಜಾರೋಹಣಗೈದರು.
ತುಂಬೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೀಶ್ ಸಾಲಿಯಾನ್ ಒಲಿಂಪಿಕ್ ಧ್ವಜಾರೋಹಣ ಮಾಡಿದರು. ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎನ್. ಗಂಗಾಧರ ಆಳ್ವ ಸ್ವಾಗತಿಸಿ ಶಾಲಾ ಧ್ವಜಾರೋಹಣ ಗೈದರು.

ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಷ್ಣು ನಾರಾಯಣ ಹೆಬ್ಬಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತುಂಬೆ ಗ್ರಾಮ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷ ಪ್ರವೀಣ್ ತುಂಬೆ, ತುಂಬೆ ಕಾಲೇಜು ಪಿ.ಟಿ.ಎ. ಅಧ್ಯಕ್ಷ ನಿಸಾರ್ ಅಹಮ್ಮದ್, ಉಪಾಧ್ಯಕ್ಷೆ ಮೋಹಿನಿ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ್ ರೈ ಮೇರಾವು, ಬಿ.ಎ., ಐ.ಟಿ.ಐ ಪ್ರಾಂಶುಪಾಲ ನವೀನ್ ಕುಮಾರ್, ತಾಲೂಕು ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷೆ ರತ್ನಾವತಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಜಾಯೆಲ್ , ಸ್ಕೌಟ್ಸ್ ನ ಬಿ.ಎಂ.ತುಂಬೆ, ಸದಾಶಿವ ಡಿ.ತುಂಬೆ, ಇಬ್ರಾಹಿಂ ವಳವೂರು, ಶಿಕ್ಷಣ ಸಂಯೋಜಕಿ ಕೆ. ಸುಜಾತ ಕುಮಾರಿ, ಶ್ರೀಮತಿ ಸುಧಾ, ಪದ್ಮಾವತಿ, ತುಂಬೆ ಪ್ರೌಢ ಶಾಲಾ ಮುಖ್ಯಸ್ಥೆ ವಿದ್ಯಾ ಕೆ., ದೈಹಿಕ ಶಿಕ್ಷಣ ನಿರ್ದೇಶಕ ಸಾಯಿರಾಮ್ ಜೆ.ನಾಯಕ್, ಅಬ್ದುಲ್ ಗಫೂರ್, ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಮೋಲಿ ಎಡ್ನ ಗೊನ್ಸಾಲ್ವಿಸ್, ರಮೇಶ್ ನಾಯಕ್ ಮತ್ತಿತರರು* ಉಪಸ್ಥಿತರಿದ್ದರು .

ಇದೇ ವೇಳೆ ನಿವೃತ್ತ ಮುಖ್ಯೋಪಾಧ್ಯಾಯ
ಶ್ರೀನಿವಾಸ್ ಕೆದಿಲ ಹಾಗೂ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕಿ ಲಿಲ್ಲಿ ಪಾಯಸ್ ಇವರನ್ನು ಸನ್ಮಾನಿಸಲಾಯಿತು.
ತುಂಬೆ ವಿದ್ಯಾರ್ಥಿನಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ದೈಹಿಕ ಶಿಕ್ಷಣ ಶಿಕ್ಷಕ ಜಗದೀಶ್ ರೈ ಬಿ. ವಂದಿಸಿದರು. ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಯ ಅಧೀಕ್ಷಕ ಅಬ್ದುಲ್ ಕಬೀರ್ ಬಿ. ಕಾರ್ಯಕ್ರಮ ನಿರೂಪಿಸಿದರು.