ಡೈಲಿ ವಾರ್ತೆ: 27/OCT/2023

ಆಸ್ಪತ್ರೆಯಿಂದ ಮಗು ಕದ್ದು ಸಾಗಿಸುತ್ತಿದ್ದ ಮಹಿಳೆಯನ್ನು ಬಂಧಿಸಿದ ಪೊಲೀಸರ ಕಾರ್ಯಕ್ಕೆ ಸಿಎಂ ಮೆಚ್ಚುಗೆ

ಕೋಲಾರ: ನವಜಾತ ಶಿಶುವನ್ನು ಕಳ್ಳತನ ಮಾಡಿ ತಮಿಳುನಾಡಿಗೆ ಸಾಗಿಸುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಗರದ ಆಸ್ಪತ್ರೆ ಒಂದರಿಂದ ಮೂವರು ಮಹಿಳೆಯರು ಗುರುವಾರ ಸಂಜೆ ನಾಲ್ಕು ದಿನಗಳ ಮಗುವನ್ನು ಬ್ಯಾಗ್‍ನಲ್ಲಿ ಹಾಕಿಕೊಂಡು ಕಳ್ಳತನ ಮಾಡಿದ್ದರು. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಕ್ಷಿಪ್ರ ಕಾರ್ಯಾಚರಣೆ ಕೈಗೊಂಡ ಪೊಲೀಸರು ಕೇವಲ ಐದೇ ಗಂಟೆಯಲ್ಲಿ ಮಗುವನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಮಗುವನ್ನು ಮರಳಿ ತಾಯಿಯ ಮಡಿಲಿಗೆ ಸೇರಿಸಿದ್ದಾರೆ.

ಮಗು ಕಳ್ಳತನ ಮಾಡಿದ್ದ ಮೂವರ ಪೈಕಿ ಓರ್ವ ಮಹಿಳೆಯನ್ನು ತಮಿಳುನಾಡಿನ ಬೇರಿಕೆ ಬಳಿ ಬಂಧಿಸಲಾಗಿದೆ. ತಪ್ಪಿಸಿಕೊಂಡಿರುವ ಇನ್ನಿಬ್ಬರು ಮಹಿಳೆಯರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಮಗುವನ್ನು ಕಳ್ಳತನ ಮಾಡಿ ತಮಿಳುನಾಡಿಗೆ ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಮಾಲೂರಿನ ಪಟೇಲ ನಗರದ ನಂದಿನಿ ಮತ್ತು ಪೂವರ್ ಸನ್ ದಂಪಂತಿಯ ಮಗುವನ್ನ ಮೂವರು ಮಹಿಳೆಯರು ಅಪಹರಿಸಿದ್ದರು.