ಡೈಲಿ ವಾರ್ತೆ: 28/OCT/2023

ಸುಳ್ಯ: ಅಡಿಕೆ ರಾಶಿ ಮಧ್ಯೆ ಯುವಕನ ಅರೆಬೆಂದ ಮೃತದೇಹ ಪತ್ತೆ – ಆತ್ಮಹತ್ಯೆ ಶಂಕೆ!

ಸುಳ್ಯ: ತಾಲೂಕಿನ ಗುತ್ತಿಗಾರು‌ ಗ್ರಾಮದಲ್ಲಿ ಒಣಗಿದ ಅಡಿಕೆ ರಾಶಿ ಮಧ್ಯೆ ಯುವಕನೋರ್ವನ ಅರೆಬೆಂದ ಮೃತದೇಹ ಪತ್ತೆಯಾದ ಘಟನೆ‌‌ ನಡೆದಿದೆ.

ಮೃತ ವ್ಯಕ್ತಿಯನ್ನು ಇಲ್ಲಿನ ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯೂ ಎಂಬವರ ಪುತ್ರ ಸೈಬಿನ್ ಎಂದು ಗುರುತಿಸಲಾಗಿದೆ.

ಮೃತದೇಹ ಅರೆಬೆಂದ ರೀತಿಯಲ್ಲಿ ಮನೆಯ ಕೊಟ್ಟಿಗೆಯಲ್ಲಿ ಪತ್ತೆಯಾಗಿದೆ.‌ ಮೃತ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಅಂದಾಜಿಸಿದ್ದು, ಆದರೆ ಸಾವಿನ ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ.

ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.