ಡೈಲಿ ವಾರ್ತೆ: 31/OCT/2023

ಪುತ್ತೂರು: ಅಡಕೆ ಕಳ್ಳತನ ಪ್ರಕರಣ – ನಾಲ್ವರು ಆರೋಪಿಗಳ ಬಂಧನ

ಪುತ್ತೂರು: ಬಡಗನ್ನೂರು ಗ್ರಾಮದ ಕೊಯ್ಲ ಎಂಬಲ್ಲಿ ಹಳೆಯ ಮನೆಯೊಂದರ ಅಟ್ಟದಲ್ಲಿ ಗೋಣಿಯಲ್ಲಿ ಕಟ್ಟಿ ಇರಿಸಲಾಗಿದ್ದ ಅಡಕೆಯನ್ನು ಕಳವು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ

ಬಂಧಿತ ಆರೋಪಿಗಳಾದ ಬಡಗನ್ನೂರು ನಿವಾಸಿ ಶ್ರವಣ್ ಕೆ, (20), ಜಯಚಂದ್ರ, (21) ನಿಡ್ಪಳ್ಳಿ ನಿವಾಸಿಗಳಾದ ಅಶೋಕ, (24) ಮತ್ತು ಪುನೀತ್ (20) ಆರೋಪಿಗಳು

ಬಂಧಿತರಿಂದ 1,55,925/ರೂ. ಮೌಲ್ಯದ ಅಡಿಕೆ ಕಳವು ಮಾಡಲು ಉಪಯೋಗಿಸಿದ ಸ್ವಿಪ್ಟ್‌ ಕಾರು, ಮತ್ತು ಆಟೋ ರಿಕ್ಷಾ ಸೇರಿದಂತೆ ಒಟ್ಟು 4,15,925 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.