ಡೈಲಿ ವಾರ್ತೆ: 13/NOV/2023

ಗಂಗೊಳ್ಳಿ: ಘೋರ ಅಗ್ನಿ ದುರಂತ – ಹಲವು ಮೀನುಗಾರಿಕ ಬೋಟ್ ಬೆಂಕಿಗಾಹುತಿ, ಕೋಟ್ಯಾಂತರ ರೂ. ನಷ್ಟ

ವಿಡಿಯೋ ವೀಕ್ಷಿಸಿ

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಗಂಗೊಳ್ಳಿಯ ಮ್ಯಾಗನೀಸ್ ರಸ್ತೆಯಲ್ಲಿ ಹತ್ತು ಮೀನುಗಾರಿಕ ಬೋಟಿಗೆ ಬೆಂಕಿ ತಗುಲಿದ್ದು ಸುಟ್ಟು ಕರಕಲಾಗಿದೆ‌ ಎಂದು ಮಾಹಿತಿ‌ ತಿಳಿದು ಬಂದಿದೆ.

ಈ ದುರ್ಘಟನೆಯು ಪಟಾಕಿಯ ಕಿಡಿಯಿಂದ ಸಂಭವಿಸಲಾಗಿದೆ ಎಂದು ಶಂಕಿಸಲಾಗಿದೆ. ಇದರಿಂದಾಗಿ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ. ಯಾವುದೇ ಸಾವು-ನೋವು ಉಂಟಾಗಿಲ್ಲ. ಅಗ್ನಿ ಶಾಮಕ ದಳ, ಸಾರ್ವಜನಿಕರು ಬೆಂಕಿ ನಂದಿಸಲು ಹರ ಸಾಹಸ ಪಡುತ್ತಿದ್ದಾರೆ.


ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.