ಡೈಲಿ ವಾರ್ತೆ: 13/NOV/2023

ನೇಜಾರು ಕೊಲೆ ಆರೋಪಿಯನ್ನು ಶೀಘ್ರ ಬಂಧಿಸಿ, ತಕ್ಕ ಶಿಕ್ಷೆ ನೀಡಲು ಉಡುಪಿ ಜಿಲ್ಲಾ ಮುಸ್ಲಿಂ ಜಮಾಅತ್ ಆಗ್ರಹ

🔽🔽🔽🔽🔽🔽🔽🔽🔽🔽🔽


ಉಡುಪಿ : ನೇಜಾರು ನಲ್ಲಿ ನಡೆದ ಅಮಾನವೀಯ ಘಟನೆಯು ಮನುಷ್ಯ ಸಮಾಜವನ್ನು ನಾಚಿಸುವ ಕ್ರತ್ಯವಾಗಿದ್ದು ಹಾಡುಹಗಲೇ ಇಂತಹ ಕ್ರತ್ಯಗಳು ನಡೆಯುವುದು ದುಷ್ಕರ್ಮಿಗಳಿಗೆ ಕಾನೂನಿನ ಭಯ ಇಲ್ಲದಿರುವುದರಿಂದ ಮಾತ್ರ. ಇದರ ಬಗ್ಗೆ ಅತೀ ಶೀಘ್ರವಾಗಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಮತ್ತು ಆರೋಪಿಗಳನ್ನು ಬಂಧಿಸಿ ತಕ್ಕಶಿಕ್ಷೆ ನೀಡಬೇಕು ಹಾಗೂ ಯಾವುದೇ ವಕೀಲರು ಇಂತಹ ದುಷ್ಕರ್ಮಿಗಳ ಪರವಾಗಿ ವಾದಿಸಬಾರದಾಗಿ ಕರ್ನಾಟಕ ಮುಸ್ಲಿಂ ಜಮಾಅತ್ ಜಿಲ್ಲಾಧ್ಯಕ್ಷ ಬಿಎಸ್ಎಫ್ ರಫೀಕ್ ಹಾಗೂ ಪ್ರದಾನ ಕಾರ್ಯದರ್ಶಿ ಹೆಚ್ ಸುಭಾನ್ ಅಹ್ಮದ್ ಹೊನ್ನಾಳ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.